SHIVAMOGGA LIVE NEWS | 24 OCTOBER 2023
SHIMOGA : ಜೋಳದ ಹೊಲಕ್ಕೆ ನುಗ್ಗಿ ದನಗಳು ಬೆಳೆ ಹಾನಿ ಮಾಡಿದ ವಿಚಾರವಾಗಿ ಯುವಕನೊಬ್ಬನ ತಲೆಗೆ ಮಚ್ಚಿನಿಂದ ಹೊಡೆದು (Attack) ಗಂಭೀರ ಗಾಯಗೊಳಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಟ್ಟಿಕೆರೆ ಗ್ರಾಮದ ಕೌಶಿಕ್ (19) ಎಂಬಾತ ಗಂಭೀರ ಗಾಯಗೊಂಡಿದ್ದಾನೆ. ಕೌಶಿಕ್ ಅವರ ಜೋಳದ ಹೊಲಕ್ಕೆ ದನಗಳು ನುಗ್ಗಿದ್ದು, ಬೆಳೆ ಹಾನಿಯಾಗಿತ್ತು. ದನಗಳನ್ನು ಸರಿಯಾಗಿ ನೋಡಿಕೊಳ್ಳಿ ಎಂದು ಅವುಗಳ ಮಾಲೀಕರಿಗೆ ಕೌಶಿಕ್ ತಿಳಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅ.21ರಂದು ದನದ ಮಾಲೀಕ ಮತ್ತು ಆತನ ಮಗ ಜಮೀನಿಗೆ ಹೋಗುತ್ತಿದ್ದ ಕೌಶಿಕ್ನನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ್ದಾರೆ. ಮಚ್ಚಿನಿಂದ ತಲೆಯ ಹಿಂಭಾಗಕ್ಕೆ ಹೊಡೆದಿದ್ದಾರೆ (Attack) ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ- ಬೈಕ್ ಹಾರನ್ ಮಾಡಿದ್ದಕ್ಕೆ ಫಾಲೋ ಮಾಡಿಕೊಂಡು ಬಂದು ಮಾರಕಾಸ್ತ್ರದಿಂದ ದಾಳಿ
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೌಶಿಕ್ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200