ಶಿವಮೊಗ್ಗ ಲೈವ್.ಕಾಂ | SHIMOGA | 6 ಮೇ 2020
ಲಾಕ್ಡೌನ್ ಸಡಿಲಗೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಮತ್ತೆ ಲಾಂಗು, ಮಚ್ಚುಗಳು ಸದ್ದು ಮಾಡಲು ಅರಂಭಸಿವೆ. ಶಿವಮೊಗ್ಗದಲ್ಲಿ ಯುವಕನೊಬ್ಬನ ಹತ್ಯೆಗೆ ಯತ್ನ ನಡೆದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮನೋಜ್ ಶೆಟ್ಟ (32) ಎಂಬಾತನ ಮೇಲೆ ಭಾರತಿ ಕಾಲೋನಿಯಲ್ಲಿ ಐವರ ಗುಂಪು ದಾಳಿ ನಡೆಸಿದೆ. ಆತನ ಹತ್ಯೆಗೆ ಯತ್ನಿಸಲಾಗಿದೆ. ಅದೃಷ್ಟವಶಾತ್ ಮನೋಜ್ ಶೆಟ್ಟಿ ಬಚಾವಾಗಿದ್ದಾನೆ. ಆದರೆ ತೀವ್ರ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲು ಮಾಡಾಗಿದೆ.

ಹತ್ಯೆಗೆ ಯತ್ನಿಸಿದ್ದು ಯಾರು? ಕಾರಣವೇನು?
ಪೊಲೀಸ್ ಮಾಹಿತಿ ಪ್ರಕಾರ, ಹಣಕಾಸು ವ್ಯವಹಾರ ಸಂಬಂಧ ಮನೋಜ್ ಶೆಟ್ಟಿ ಮೇಲೆ ಹಲ್ಲೆ ನಡೆದಿದೆ. ಭಾರತಿ ಕಾಲೋನಿಯ ಐವರು ಈ ದುಷ್ಕೃತ್ಯ ಎಸಗಿದ್ದಾರೆ. ಹಣಕಾಸು ವ್ಯವಹಾರ ಸಂಬಂಧ ಅದೇ ಏರಿಯಾದ ಇಬ್ಬರೊಂದಿಗೆ ಮನೋಜ್ ಶೆಟ್ಟಿಗೆ ಜಗಳವಾಗಿತ್ತು. ಈ ಸಂಬಂಧ ಮಂಗಳವಾರ ರಾತ್ರಿ ಮನೋಜ್ ಶೆಟ್ಟಿಯನ್ನು ಮಾತುಕತೆಗೆ ಕರೆದು ಹತ್ಯೆಗೆ ಯತ್ನಿಸಲಾಗಿದೆ.

ಕುತ್ತಿಗೆ ಭಾಗದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಮಧ್ಯೆ ಬಿದ್ದಿದ್ದ ಮನೋಜ್ ಶೆಟ್ಟಿಯನ್ನು ಜನರೆ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]