ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಉಷಾ ನರ್ಸಿಂಗ್ ಹೋಂ ಬಳಿ ರಾತ್ರಿ ಅಂಡಿಯೊಂದರ ಬೀಗ ತೆಗೆಯಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೆಟ್ಟಿಗೆ ಅಂಗಡಿಯೊಂದರ ಬೀಗ ತೆಗೆಯಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿದ್ದ. ಪೊಲೀಸರು ಬರುತ್ತಿದ್ದಂತೆ ಮರೆಯಾಗಲು ಯತ್ನಿಸಿದ್ದಾನೆ. ಅನುಮಾನದಿಂದ ಆತನನ್ನು ಹಿಡಿದ ಜಯನಗರ ಠಾಣೆಯ ಪೊಲೀಸ್ ಸಿಬ್ಬಂದಿ, ವಿಚಾರಣೆ ನಡೆಸಿದಾಗ ಸಮರ್ಪಕ ಉತ್ತರ ನೀಡಿಲ್ಲ. ಹಾಗಾಗಿ ಆತನನ್ನು ಬಂಧಿಸಲಾಗಿದೆ.
ಬಂಧಿತನನ್ನು ಹರೀಶ (40) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಜಯನಗರ ಠಾಣೆಯ ಪೊಲೀಸ್ ಸಿಬ್ಬಂದಿ ಆದರ್ಶ್ ಕಾರ್ಯಾಚರಣೆ ನಡೆಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200