SHIVAMOGGA LIVE NEWS | 6 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SAGARA : ವ್ಯಕ್ತಿಯೊಬ್ಬರಿಂದ ಲಂಚ ಪಡೆಯುವಾಗ ತಾಲೂಕು ಕಚೇರಿಯ ಅಟೆಂಡರ್ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಸಾಗರ ತಾಲೂಕು ಕಚೇರಿಯ ದಾಖಲಾತಿ ವಿಭಾಗದ ಆರ್.ಆರ್.ಟಿ ಶಾಖೆಯ ಅಟೆಂಡರ್ (Attender) ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದಾತ.
ಏನಿದು ಪ್ರಕರಣ?
ಸಾಗರದ ಬಳಸಗೋಡು ಗ್ರಾಮದಲ್ಲಿ ತೋಹಿದ್ ಅಬ್ದುಲ್ ಎಂಬುವವರಿಗೆ ಸೇರಿದ ಜಮೀನಿನ ಆರ್.ಟಿ.ಸಿ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು. ಅವರ ಸ್ನೇಹಿತ ಅಸೀಬ್ ಎಂಬುವವರು ತಾಲೂಕು ಕಚೇರಿಗೆ ತೆರಳಿ ಅಟೆಂಡರ್ ಬಸವರಾಜ್ ಅವರ ಆರ್ಟಿಸಿಗೆ ಬೇಡಿಕೆ ಇಟ್ಟಿದ್ದರು. ಆಗ ಬಸವರಾಜು 1500 ರೂ. ಹಣ ಪಡೆದಿದ್ದರು. ಅಸೀಬ್ ಅವರ ಸ್ನೇಹಿತ ನವೀನ್ ಎಂಬುವವರು ಇದನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದರು. ದಾಖಲೆ ಒದಗಿಸಿದಾಗ ಶಿರಸ್ತೇದಾರ್ ಸಹಿ ಇರಲಿಲ್ಲ. ಇದನ್ನು ಹಾಕಿಸಿಕೊಡಲು 2000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಇವತ್ತು ಅಟೆಂಡರ್ ಬಸವರಾಜು 2000 ಸಾವಿರ ರೂ. ನಗದು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣವನ್ನು ವಶಕ್ಕೆ ಪಡೆದು ಅಟೆಂಡರ್ ಬಸವರಾಜುನನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕಾಯುಕ್ತ ಅಧೀಕ್ಷಕ ಮಂಜುನಾಥ ಚೌದರಿ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿ ದಾಳಿ ನಡೆಸಲಾಗಿದೆ. ಡಿವೈಎಸ್ಪಿ ಉಮೇಶ್ ಈಶ್ವರ ನಾಯ್ಕ, ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್, ಸಿಬ್ಬಂದಿ ಯೋಗೇಶ್, ಸುರೇಂದ್ರ, ಚನ್ನೇಶ, ರಘುನಾಯ್ಕ, ಪುಟ್ಟಮ್ಮ, ಗಂಗಾಧರ, ಪ್ರದೀಪ್, ಜಯಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಮತ ಎಣಿಕೆ ಆರಂಭ, ಇವತ್ತು ನಿರ್ಧಾರವಾಗುತ್ತೆ ಡಾ.ಸರ್ಜಿ, ಆಯನೂರು, ದಿನೇಶ್, ರಘಪತಿ ಭಟ್ ಭವಿಷ್ಯ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






