SHIVAMOGGA LIVE NEWS | 2 ಮಾರ್ಚ್ 2022
ಶಿವಮೊಗ್ಗದ KSRTC ಬಸ್ ನಿಲ್ದಾಣದಲ್ಲಿ ಬ್ಯಾಗ್ ಕಳ್ಳರ ಹಾವಳಿ ಮುಂದುವರೆದಿದೆ. ಮೈಸೂರಿಗೆ ತೆರಳಲು ಬಸ್ ಹತ್ತಿದ್ದ ಯುವತಿಯೊಬ್ಬರ ಲ್ಯಾಪ್ ಟಾಪ್ ಬ್ಯಾಗ್ ಕಳವು ಮಾಡಲಾಗಿದೆ.
ಖಾಸಗಿ ಕಂಪನಿ ಉದ್ಯೋಗಿ ಅನುಶ್ರೀ ಎಂಬುವವರು ಮೈಸೂರಿಗೆ ತೆರಳಲು ಬಸ್ ಹತ್ತಿದ್ದರು. ಲಗೇಜ್ ಬ್ಯಾಗ್ ಮತ್ತು ಲ್ಯಾಪ್ ಟಾಪ್ ಬ್ಯಾಗನ್ನು ಸೀಟಿನಲ್ಲಿ ಇರಿಸಿದ್ದರು. ಕಂಡಕ್ಟರ್’ಗೆ ತಿಳಿಸಿ ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಲ್ಯಾಪ್ ಟಾಪ್ ಬ್ಯಾಗ್ ನಾಪ್ತೆಯಾಗಿತ್ತು.
ಲ್ಯಾಪ್ ಟಾಪ್ ಬ್ಯಾಗಿನಲ್ಲಿ ಒಂದು ಲ್ಯಾಪ್ ಟಾಪ್, ಮೌಸ್, 2500 ರೂ. ನಗದು, ಎಟಿಎಂ ಕಾರ್ಡ್, ಪಾನ್ ಕಾರ್ಡ್, ಇತರೆ ದಾಖಲೆಗಳಿದ್ದ ಪರ್ಸ್ ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಕರ್ನಾಟಕ ಸಂಘ ಬಳಿ ಬ್ರಾಂಚ್ ಮ್ಯಾನೇಜರ್ ಬ್ಯಾಗ್ ಲಪಟಾಯಿಸಿದ ಕಳ್ಳರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200