SHIVAMOGGA LIVE NEWS | 15 JUNE 2024
ANANDAPURA : ಮನೆಯಲ್ಲಿ ಯಾರೂ ಇಲ್ಲದಾಗ ಬಾಗಿಲಿನ ಇಂಟರ್ ಲಾಕ್ (interlock) ಮುರಿದು ಬಂಗಾರ ಮತ್ತು ಹಣವನ್ನು ಕಳವು ಮಾಡಿದ ಘಟನೆ ಅಂದಾಸುರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ಅವರು ಅಂದಾಸುರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪದೋನ್ನತಿ ಮೇರೆಗೆ ಅವರಿಗೆ ಮಣಿಪಾಲಕ್ಕೆ ವರ್ಗಾವಣೆಯಾಗಿತ್ತು.
ಶನಿವಾರ ಮಣಿಪಾಲಕ್ಕೆ ಕರ್ತವ್ಯಕ್ಕೆ ಹಾಜರಾಗಿದ್ದು, ಮನೆಯನ್ನು ಇನ್ನೂ ಖಾಲಿ ಮಾಡಿರಲಿಲ್ಲ. ಬೀರುವಿನಲ್ಲಿ ಇಟ್ಟಿದ್ದ 330 ಗ್ರಾಂ ಬಂಗಾರ ಮತ್ತು 90 ಸಾವಿರ ರೂ. ಕಳ್ಳತನವಾಗಿದೆ ಎಂದು ಅಬ್ದುಲ್ ಅಹಮದ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಚುನಾವಣೆಗೆ ಸಹಾಯ ಮಾಡಲಿಲ್ಲ ಅಂತಾ ಕೊಲೆ, ಶಿವಮೊಗ್ಗದಲ್ಲಿ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಏನಿದು ಕೇಸ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200