Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭದ್ರಾವತಿಯಲ್ಲಿ ಎರಡೇ ದಿನದಲ್ಲಿ ಮಾಲು ಸಹಿತ ಆರೋಪಿಗಳು ಅಂದರ್‌

ಭದ್ರಾವತಿಯಲ್ಲಿ ಎರಡೇ ದಿನದಲ್ಲಿ ಮಾಲು ಸಹಿತ ಆರೋಪಿಗಳು ಅಂದರ್‌

13/08/2024 9:34 AM
ನಿತಿನ್‌ ಕೈದೊಟ್ಲು

BHADRAVATHI, 13 AUGUST 2024 :‌ ಶಾರದಾ ಮಂದಿರ ಎದುರು ನಿಂತಿದ್ದ ವೃದ್ಧನಿಗೆ ಬೆದರಿಸಿ ಚಿನ್ನಾಭರಣ ಹಾಗೂ ಹಣ ಸುಲಿಗೆ ಮಾಡಿದ್ದ ಇಬ್ಬರನ್ನು ಪೊಲೀಸರು ಎರಡೇ ದಿನದಲ್ಲಿ ಬಂಧಿಸಿದ್ದು (ARREST) 1.94 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಭದ್ರಾವತಿ ಅನ್ವ‌ರ್ ಕಾಲನಿ ಮೊಮಿನ್‌ ಮೊಹಲ್ಲಾದ ಜಬೀವುಲ್ಲಾ ಅಲಿಯಾಸ್ ಮಲ್ಲಿ (23) ಮತ್ತು ಮಹಮದ್ ಗೌಸ್ ಅಲಿಯಾಸ್ ಗುಂಡಾ(24) ಬಂಧಿತರು. ಕಳೆದ ಶುಕ್ರವಾರ ರಾತ್ರಿ ಭದ್ರಾವತಿ ಟೌನ್‌ನ ಶಾರದಾ ಮಂದಿರ ಬಳಿ ನಿಂತಿದ್ದ ಹುತ್ತಾ ಕಾಲನಿಯ ಮುರಳೀಧರ್ (64) ಎಂಬುವರನ್ನು ನಾಲ್ಕೈದು ಯುವಕರ ಗುಂಪು ಬೆದರಿಸಿ ಉಂಗುರ, ಚಿನ್ನದ ಸರ, ಹಣ ಮತ್ತು ಇತರೆ ವಸ್ತುಗಳನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ ಮುರುಳೀಧರ್ ಅವರು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ ⇒ ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಒಳ ಹರಿವು ಇವತ್ತು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

ಭದ್ರಾವತಿ ನಗರ ಸಿಪಿಐ ಶ್ರೀಶೈಲಕುಮಾರ್ ನೇತೃತ್ವದಲ್ಲಿ ನ್ಯೂಟೌನ್ ಠಾಣೆ ಪಿಎಸ್‌ಐಗಳಾದ ಟಿ.ರಮೇಶ್, ಭಾರತಿ, ಹಳೇನಗರ ಠಾಣೆ ಪಿಎಸ್‌ಐ ಚಂದ್ರಶೇಖ‌ರ್ ನಾಯ್ಕ, ಸಿಬ್ಬಂದಿ ಟಿ.ಪಿ.ಮಂಜಪ್ಪ, ನವೀನ್, ಸಂತೋಷ ನಾಯ್ಕ, ಪ್ರಸನ್ನ, ಹಾಲಪ್ಪ, ಮೌನೇಶ ಶಿಕಲ್‌, ಎಫ್.ಎಸ್‌. ಚಿಕ್ಕಪ್ಪ, ಪ್ರವೀಣ್ ನೇತೃತ್ವದ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದೆ. ಆರೋಪಿಗಳಿಂದ 1.59 ಲಕ್ಷ ರೂ. ಮೌಲ್ಯದ 24.5 ಗ್ರಾಂ ಬಂಗಾರದ ಸರ ಮತ್ತು ಉಂಗುರ ಹಾಗೂ 35 ಸಾವಿರ ರೂ. ಮೌಲ್ಯದ ಬೈಕ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

BHADRAVATHI-POLICE-NAB-TWO-FOR-ROBBERY.

ಇದನ್ನೂ ಓದಿ ⇒ ಸಾಲ ವಸೂಲಿಗೆ ಮಹಿಳೆಯರ ಮನೆಗೆ ಹೋಗಿ ಕೂರುವ ಸಿಬ್ಬಂದಿ, ಖಡಕ್‌ ಸೂಚನೆ ನೀಡುವಂತೆ ಏಕಾಂಗಿ ಹೋರಾಟ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article linganamakki-dam-back-water ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಒಳ ಹರಿವು ಇವತ್ತು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌
Next Article Taekwondo ಶಿವಮೊಗ್ಗಕ್ಕೆ ಎರಡು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕ

ಇದನ್ನೂ ಓದಿ

Prohibition-at-Bhadra-Dam-ahead-of-farmers-protest.
BHADRAVATHI

ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Instagram-Cyber-Crime-Shimoga-Station.
CRIME DIARY

ಯುವತಿಗೆ ಬಂತು ಫ್ರೆಂಡ್‌ ರಿಕ್ವೆಸ್ಟ್‌, ಪರಿಶೀಲಿಸಿದಾಗ ಕಾದಿತ್ತು ಶಾಕ್‌, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
KSRTC-Bus-General-Image
CRIME DIARYSHIVAMOGGA CITY

NR ಪುರಕ್ಕೆ ತೆರಳಲು ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ಕುಳಿತ ಕಡೂರಿನ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
Bommanakatte-incident-police-investigation-on
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
Bhadra-Dam-General-Image
BHADRAVATHI

ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Holehonnuru-residents-protest-against-road-crack
BHADRAVATHI

ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?