ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022
ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಾಯಗೊಂಡಿದ್ದು, ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಾಗರ ರಸ್ತೆಯ ಪಿಇಎಸ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಅರುಣ್ ಕುಮಾರ್ ಎಂಬುವವರು ಸಮೀಪದ ಫಾರಂಗೆ ಹೋಗಿ ಕೆಲಸ ಮುಗಿಸಿ ಶಿವಮೊಗ್ಗಕ್ಕೆ ಮರಳುತ್ತಿದ್ದರು. ಅರುಣ್ ಕುಮಾರ್ ಅವರು ಚಲಿಸುತ್ತಿದ್ದ ಬೈಕಿಗೆ ಅದೆ ಮಾರ್ಗದಲ್ಲಿ ವೇಗವಾಗಿ ಬಂದ ಮತ್ತೊಂದು ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದಿದ್ದರಿಂದ ಅರುಣ್ ಕುಮಾರ್ ಅವರು ಕೆಳಗೆ ಬಿದ್ದಿದ್ದು ಕಾಲು, ಭುಜ, ಕೈಗೆ ಗಾಯವಾಗಿದೆ. ಕೂಡಲೆ ಅವರನ್ನು ನಂಜಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಯುವಕ, ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200