ಭದ್ರಾವತಿಯ ಗೋಣಿಬೀಡು ಬಳಿ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಸವಾರನಿಗೆ ಗಂಭೀರ ಗಾಯವಾಗಿದೆ. ಕೂಡಲೆ ಸ್ಥಳೀಯರ ನೆರವಿನಿಂದ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಂಕರಘಟ್ಟ ಸಮೀಪದ ಕುವೆಂಪು ನಗರದ ನಿವಾಸಿ ಮಧು (28) ಗಾಯಗೊಂಡಿದ್ದಾರೆ.

ಕುವೆಂಪು ನಗರದಿಂದ ಭದ್ರಾವತಿ ಕಡೆಗೆ ಮಧು ಬೈಕ್’ನಲ್ಲಿ ತೆರಳುತ್ತಿದ್ದರು.ಗೋಣಿಬೀಡು ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ತಲೆಗೆ ಗಂಭೀರ ಗಾಯವಾಗಿದ್ದು ತೀವ್ರ ರಕ್ತಸ್ರಾವ ಉಂಟಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

LifeSpring%2BKan%2B02

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment