ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022
ಎಗ್ ರೈಸ್ ತಿನ್ನಲು ಬಂದ ಯುವಕನೊಬ್ಬನಿಗೆ ಬೈಕ್ ಡಿಕ್ಕಿಯಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಮಂಡಗದ್ದೆ ಸಮೀಪದ 17ನೇ ಮೈಲಿ ಕಲ್ಲು ಬಳಿ ಘಟನೆ ಸಂಭವಿಸಿದೆ. ರಾಜೇಶ್ ಎಂಬುವವರಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದರು.
ರಾಜೇಶ್ ಅವರ ಸಂಬಂಧಿಯೊಬ್ಬರು ಎಗ್ ರೈಸ್ ತಿನ್ನಲು ಬರುವಂತೆ ತಿಳಿಸಿದ್ದರು. ಮನೆಯಿಂದ ಹೊರ ಬಂದ ರಾಜೇಶ್ ಅವರು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಬೈಕ್ ಅತಿ ವೇಗವಾಗಿ ಬಂದು ಡಿಕ್ಕಿ ಹೊಡದಿದೆ.
ಘಟನೆಯಲ್ಲಿ ರಾಜೇಶ್ ಅವರ ಕಾಲು, ಕೈಗೆ ಗಾಯವಾಗಿದೆ. ಕೂಡಲೆ ಅವರನ್ನು 108 ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಘಟನೆ ಸಂಬಂಧ ಬೈಕ್ ಸವಾರ ರಹಮತುಲ್ಲಾ ಎಂಬುವವರ ವಿರುದ್ಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಹಣಗೆರೆಯಲ್ಲಿ ಪೂಜೆ ಮುಗಿಸಿ ಹೊರ ಬಂದ ಹಾವೇರಿಯ ಭಕ್ತರಿಗೆ ಶಾಕ್
LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






