ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022
ಎಗ್ ರೈಸ್ ತಿನ್ನಲು ಬಂದ ಯುವಕನೊಬ್ಬನಿಗೆ ಬೈಕ್ ಡಿಕ್ಕಿಯಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಮಂಡಗದ್ದೆ ಸಮೀಪದ 17ನೇ ಮೈಲಿ ಕಲ್ಲು ಬಳಿ ಘಟನೆ ಸಂಭವಿಸಿದೆ. ರಾಜೇಶ್ ಎಂಬುವವರಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದರು.
ರಾಜೇಶ್ ಅವರ ಸಂಬಂಧಿಯೊಬ್ಬರು ಎಗ್ ರೈಸ್ ತಿನ್ನಲು ಬರುವಂತೆ ತಿಳಿಸಿದ್ದರು. ಮನೆಯಿಂದ ಹೊರ ಬಂದ ರಾಜೇಶ್ ಅವರು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಬೈಕ್ ಅತಿ ವೇಗವಾಗಿ ಬಂದು ಡಿಕ್ಕಿ ಹೊಡದಿದೆ.
ಘಟನೆಯಲ್ಲಿ ರಾಜೇಶ್ ಅವರ ಕಾಲು, ಕೈಗೆ ಗಾಯವಾಗಿದೆ. ಕೂಡಲೆ ಅವರನ್ನು 108 ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಘಟನೆ ಸಂಬಂಧ ಬೈಕ್ ಸವಾರ ರಹಮತುಲ್ಲಾ ಎಂಬುವವರ ವಿರುದ್ಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಹಣಗೆರೆಯಲ್ಲಿ ಪೂಜೆ ಮುಗಿಸಿ ಹೊರ ಬಂದ ಹಾವೇರಿಯ ಭಕ್ತರಿಗೆ ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200