SHIVAMOGGA LIVE NEWS | 15 MARCH 2024
ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್
HOLEHONNURU : ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಅಗರದಳ್ಳಿ ಕ್ಯಾಂಪ್ನಲ್ಲಿ ಕೂಲಿ ಕೆಲಸಕ್ಕೆ ಹೋಗಿ ಸಿದ್ದರ ಕಾಲೋನಿಯ ಮನೆಗೆ ಮರಳುತ್ತಿದ್ದ ನಾಗರಾಜಪ್ಪ ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಗರದಳ್ಳಿ ಕ್ಯಾಂಪ್ ಕಡೆಯಿಂದ ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ನಾಗರಾಜಪ್ಪ ಅವರಿಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಕೂಡಲೆ ನಾಗರಾಜಪ್ಪ ಅವರನ್ನು ಹೊಳೆಹೊನ್ನೂರು ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಸವಾರನ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಅಟ್ಯಾಕ್
BHADRAVATHI : ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರರು ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಲಾರಿಯು ಅನ್ವರ್ ಕಾಲೋನಿಯಿಂದ ಜಟ್ಪಟ್ ನಗರಕ್ಕೆ ತೆರಳುತ್ತಿತ್ತು. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಕುಳಿತು ಬಂದ ಮೂವರು ಲಾರಿ ಚಕ್ರಕ್ಕೆ ಡಿಕ್ಕಿ ಹೊಡೆಸಿಕೊಂಡು ಕೆಳಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಅಪಘಾತದ ಹಿನ್ನೆಲೆ ಲಾರಿ ಚಾಲಕ ಗುಂಡಣ್ಣ ಮತ್ತು ಲಾರಿಯಲ್ಲಿದ್ದ ರಾಜು ಅವರ ಮೇಲೆ ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ. ಬೈಕ್ ಸವಾರರ ಜೊತೆಗೆ ಇನ್ನೂ ಕೆಲವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಹಲ್ಲೆಕೋರರು ಪರಾರಿಯಾಗಿದ್ದಾರೆ. ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್, ಎಫ್ಐಆರ್ನಲ್ಲಿ ಏನಿದೆ? ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ಏನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200