SHIVAMOGGA LIVE NEWS | 25 DECEMBER 2023
ANANDAPURA : ರಿವರ್ಸ್ ಬರುತ್ತಿದ್ದ ಲಾರಿಗೆ ಸಿಲುಕಿ ಬೈಕ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಗರ ತಾಲೂಕು ಆನಂದಪುರ ಸಮೀಪದ ಮಲ್ಲಂದೂರಿನಲ್ಲಿ ಘಟನೆ ಸಂಭವಿಸಿದೆ.
ಶಿಕಾರಿಪುರ ಕಡೆಯಿಂದ ಬರುತ್ತಿದ್ದ ಬೈಕ್ ರಿವರ್ಸ್ ತೆಗೆಯುತ್ತಿದ್ದ ಲಾರಿಯನ್ನು ದಾಟಿ ಹೋಗಲು ಯತ್ನಿಸಿದೆ. ಈ ಹೊತ್ತಿಗೆ ಎದುರಿನಿಂದ ಮತ್ತೊಂದು ವಾಹನ ಬಂದಿದೆ. ಅದಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಸವಾರ ಬೈಕಿನಿಂದ ಕೆಳಗೆ ಹಾರಿದ್ದಾನೆ. ಆದರೆ ಬೈಕ್ ಮುಂದಿದ್ದ ಲಾರಿಗೆ ಡಿಕ್ಕಿ ಹೊಡೆದು ಅದರ ಚಕ್ರಕ್ಕೆ ಸಿಲುಕಿದೆ. ಬೈಕ್ನ ಮುಂಭಾಗ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಸಿಟಿ ಬಸ್ಸಿನಲ್ಲಿ ಮೊಬೈಲ್ ಬಳಸಿದ ಚಾಲಕ, ಫೋಟೊ ತೆಗೆದ ಪ್ರಯಾಣಿಕ, ಮುಂದೇನಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200