ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 MARCH 2023
SHIMOGA : ಬೈಕ್ ಅಡ್ಡಗಟ್ಟಿ ಸವಾರನ (Rider) ಮುಖಕ್ಕೆ ಹೊಡೆದು ಕಪ್ಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೊರಿಯರ್ ಸರ್ವಿಸ್ ಕೆಲಸ ಮಾಡುತ್ತಿರುವ ಮಂಜುನಾಥ್ (28) ಎಂಬುವವರು ದೂರು ನೀಡಿದ್ದಾರೆ. ಆಜಾದ್ ನಗರದ 2ನೇ ತಿರುವಿನಲ್ಲಿ ಕೊರಿಯರ್ ಕೊಟ್ಟು ಬರುವಾಗ ಘಟನೆ ನಡೆದಿದೆ.
ಕಪ್ಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಮಂಜುನಾಥ್ ಚಲಿಸುತ್ತಿದ್ದ ಬೈಕಿಗೆ (Rider) ಅಡ್ಡ ಹಾಕಿದ್ದಾನೆ. ಬೈಕ್ ನಿಲ್ಲಿಸುತ್ತಿದ್ದಂತೆ ಮಂಜುನಾಥನ ಮುಖಕ್ಕೆ ಆತ ಹೊಡೆದು, ತಕ್ಷಣ ಅಲ್ಲಿಂದ ಓಡಿ ಹೋಗಿದ್ದಾನೆ. ಕೂಡಲೆ ಮಂಜುನಾಥ್ ತನ್ನ ಸ್ನೇಹಿತನಿಗೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡಿದ್ದಾನೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾನೆ.
ಇದನ್ನೂ ಓದಿ – ಮಚ್ಚು ಹಿಡಿದು ಹುಚ್ಚಾಟ, ಅಂಗಡಿಯಲ್ಲಿ ವಸ್ತುಗಳು ಚಲ್ಲಾಪಿಲ್ಲಿ, ಕಾರಿನ ಗಾಜು ಪೀಸ್ ಪೀಸ್, ಒಬ್ಬನ ಮೇಲೆ ದಾಳಿ

LATEST NEWS
- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













