ನಡುರಸ್ತೆಯಲ್ಲಿ ಕೊರಿಯರ್ ಸರ್ವಿಸ್ ಯುವಕನ ಮುಖಕ್ಕೆ ಹೊಡೆದ ‘ಕಪ್ಪು ಅಂಗಿ’ ವ್ಯಕ್ತಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 1 MARCH 2023

SHIMOGA : ಬೈಕ್ ಅಡ್ಡಗಟ್ಟಿ ಸವಾರನ (Rider) ಮುಖಕ್ಕೆ ಹೊಡೆದು ಕಪ್ಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

200123 Police Jeep With Light jpg

ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೊರಿಯರ್ ಸರ್ವಿಸ್ ಕೆಲಸ ಮಾಡುತ್ತಿರುವ ಮಂಜುನಾಥ್ (28) ಎಂಬುವವರು ದೂರು ನೀಡಿದ್ದಾರೆ. ಆಜಾದ್ ನಗರದ 2ನೇ ತಿರುವಿನಲ್ಲಿ ಕೊರಿಯರ್ ಕೊಟ್ಟು ಬರುವಾಗ ಘಟನೆ ನಡೆದಿದೆ.

ಕಪ್ಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಮಂಜುನಾಥ್ ಚಲಿಸುತ್ತಿದ್ದ ಬೈಕಿಗೆ (Rider) ಅಡ್ಡ ಹಾಕಿದ್ದಾನೆ. ಬೈಕ್ ನಿಲ್ಲಿಸುತ್ತಿದ್ದಂತೆ ಮಂಜುನಾಥನ ಮುಖಕ್ಕೆ ಆತ ಹೊಡೆದು, ತಕ್ಷಣ ಅಲ್ಲಿಂದ ಓಡಿ ಹೋಗಿದ್ದಾನೆ. ಕೂಡಲೆ ಮಂಜುನಾಥ್ ತನ್ನ ಸ್ನೇಹಿತನಿಗೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡಿದ್ದಾನೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾನೆ.

ಇದನ್ನೂ ಓದಿ – ಮಚ್ಚು ಹಿಡಿದು ಹುಚ್ಚಾಟ, ಅಂಗಡಿಯಲ್ಲಿ ವಸ್ತುಗಳು ಚಲ್ಲಾಪಿಲ್ಲಿ, ಕಾರಿನ ಗಾಜು ಪೀಸ್ ಪೀಸ್, ಒಬ್ಬನ ಮೇಲೆ ದಾಳಿ

Shimoga JNNCE College VTU Ranking

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment