ಶಿವಮೊಗ್ಗ : ಬೈಕ್ನ ಮುಂಭಾಗದಲ್ಲಿ ಅಕ್ಕಮೂಟೆ (Rice Bag) ಇಟ್ಟುಕೊಂಡು ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಪಿಇಎಸ್ ಕಾಲೇಜು ಹಿಂಭಾಗ ಕಿಮ್ಮನೆ ಗಾಲ್ಫ್ ಕ್ಲಬ್ಗೆ ತೆರಳುವ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಕೇರಳ ಮೂಲದ ಎರ್ನಾಕುಲಂನ ಜೋಬಿ ಪೌಲ್ (45) ಮೃತ ಬೈಕ್ ಸವಾರ. ಇಲ್ಲಿನ ಫಾರಂ ಒಂದರಲ್ಲಿ ಜೋಬಿ ಪೌಲ್ ಕೆಲಸ ಮಾಡುತ್ತಿದ್ದರು. ಸಾಗರ ರಸ್ತೆಯ ಅಂಗಡಿಯೊಂದರಲ್ಲಿ ಅಕ್ಕಿ ಮೂಟೆ (Rice Bag) ಖರೀದಿಸಿ, ಅದನ್ನು ಬೈಕಿನ ಮುಂಭಾಗದಲ್ಲಿ ಇರಿಸಿಕೊಂಡು ಫಾರಂಗೆ ಹಿಂತಿರುಗುತ್ತಿದ್ದರು. ಈ ಸಂದರ್ಭ ನಿಯಂತ್ರಣ ತಪ್ಪಿದ ಬೈಕ್ ಗುಂಡಿಗೆ ಬಿದ್ದಿದೆ ಎಂದು ಆರೋಪಿಸಲಾಗಿದೆ.

ಗುಂಡಿಗೆ ಬಿದ್ದ ಜೋಬಿ ಪೌಲ್ ತಲೆ ಸಿಮೆಂಟ್ ಕಂಬಕ್ಕೆ ಹೊಡೆದುಕೊಂಡಿದೆ. ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಭದ್ರಾವತಿ MPM ಕುರಿತು ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್, ಏನೇನು ಚರ್ಚೆಯಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200