ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022
ಹಾವೇರಿಯ ಹಿರೇಕೆರೂರು ತಾಲೂಕಿನಿಂದ ತೀರ್ಥಹಳ್ಳಿಯ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಬಂದಿದ್ದವರ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನುಮಗೌಡ ಪಾಟೀಲ್ ಎಂಬುವವರು ತಮ್ಮ ಊರಿನ ಒಬ್ಬರೊಂದಿಗೆ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಆಗಮಿಸಿದ್ದರು. ತಮ್ಮ ಮಾವನ ಪ್ಯಾಷನ್ ಪ್ರೋ ಬೈಕ್ ಪಡೆದುಕೊಂಡು ಬಂದಿದ್ದ ಹನುಮಗೌಡ ಪಾಟೀಲ್ ಅವರು, ದೇವಸ್ಥಾನದ ಆವರಣದಲ್ಲಿ ನಿಲ್ಲಿಸಿದ್ದರು.
ಬೆಳಗ್ಗೆ ದೇಗುಲದ ಒಳಗೆ ಹೋಗಿ ಪೂಜೆ ಮುಗಿಸಿ ಬರುವಷ್ಟರಲ್ಲಿ ಬೈಕ್ ಕಣ್ಮರೆಯಾಗಿತ್ತು. ಎಲ್ಲೆಡೆ ಹುಡುಕಿದ ಹನುಮಗೌಡ ಪಾಟೀಲ್ ಅವರು, ಬಳಿಕ ಮಾಳೂರು ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನು ಓದಿ | ಗ್ರಾಮಸ್ಥರಿಂದ ಹಣಗೆರೆ ಕಟ್ಟೆಗೆ ಬರುವ ಭಕ್ತರ ವಾಹನಗಳ ತಪಾಸಣೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200