SHIVAMOGGA LIVE NEWS | 21 FEBRUARY 2024
SHIMOGA : ಟೀ ಕುಡಿದು ಮರಳುವಷ್ಟರಲ್ಲಿ ಬೈಕ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕೆಇಬಿ ಸರ್ಕಲ್ನಲ್ಲಿ ಘಟನೆ ಸಂಭವಿಸಿದರೆ. ಸಂತೋಷ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕ್ ಕಳುವಾಗಿದೆ.
ವಿದ್ಯಾನಗರದ ಸಂತೋಷ್ ಅವರು ಬೈಕ್ ರಿಪೇರಿ ಹಿನ್ನೆಲೆ ತಮ್ಮ ಸಂಬಂಧಿ ನಿಶಾಂತ್ ಎಂಬುವವರಿಗೆ ಕೊಟ್ಟಿದ್ದರು. ರಿಪೇರಿ ಮುಗಿಸಿ ಮನೆಗೆ ಮರಳುವಾಗ ನಿಶಾಂತ್, ಕೆಇಬಿ ಸರ್ಕಲ್ನಲ್ಲಿ ಬೈಕ್ ನಿಲ್ಲಿಸಿ ಟೀ ಕುಡಿಯಲು ತೆರಳಿದ್ದರು. ಟೀ ಕುಡಿದು ಬರುವಷ್ಟರಲ್ಲಿ ಬೈಕ್ ಇರಲಿಲ್ಲ. ಘಟನೆ ಸಂಬಂಧ ಸಂತೋಷ್ ಅವರು ಜಯನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200