ಮಂಗಳೂರಿನಿಂದ ಶಿವಮೊಗ್ಗಕ್ಕೆ ಬಸ್ಸಲ್ಲಿ ಬಂದಿಳಿದ ವ್ಯಕ್ತಿಗೆ ಕಾದಿತ್ತು ಶಾಕ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 26 SEPTEMBER 2024 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್‌ (Bike) ಕಳ್ಳತನವಾಗಿದೆ. ಇನ್ನೊಂದೆಡೆ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

» ಮಂಗಳೂರಿನಿಂದ ಹಿಂತಿರುಗಿದಾಗ ಶಾಕ್‌

ಕೃಷಿ ನಗರದ ನಿವಾಸಿ ಸತೀಶ್‌ ಕುಮಾರ್‌ ಎಂಬುವವರು ತಮ್ಮ ಪಲ್ಸರ್‌ ಬೈಕ್‌ ಅನ್ನು ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದರು. ಮಂಗಳೂರಿಗೆ ಹೋಗಿ ಹಿಂತಿರುಗಿದಾಗ ಬೈಕ್‌ ಇರಲಿಲ್ಲ ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದರೂ ಬೈಕ್‌ ಸಿಗಲಿಲ್ಲ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

» ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳವು

ಮಾರ್ನಮಿ ಬೈಲ್‌ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಅನ್ನು ಹಾಡಹಗಲೆ ಕಳವು ಮಾಡಲಾಗಿದೆ. ಇಲ್ಲಿನ ಅಶ್ವಾಕ್‌ ಅಹಮದ್‌ ಅವರು ತಮ್ಮ ಜಮೀನಿಗೆ ಹೋಗಿ ಬೆಳಗ್ಗೆ 10 ಗಂಟೆ ಹೊತ್ತಿಗೆ ಮನೆಗೆ ಮರಳಿದ್ದರು. ಮನೆ ಮುಂದೆ ಹೋಂಡಾ ಆಕ್ಟೀವಾ ಬೈಕ್‌ ನಿಲ್ಲಿಸಿ ಒಳಗೆ ಹೋಗಿದ್ದರು. ಅರ್ಧ ಗಂಟೆ ಬಳಿಕ ಗಮನಿಸಿದಾಗ ಹೋಂಡಾ ಆಕ್ಟೀವಾ ಮನೆ ಮುಂದೆ ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ » ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment