SHIMOGA NEWS, 26 SEPTEMBER 2024 : ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ (Bike) ಕಳ್ಳತನವಾಗಿದೆ. ಇನ್ನೊಂದೆಡೆ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ.
» ಮಂಗಳೂರಿನಿಂದ ಹಿಂತಿರುಗಿದಾಗ ಶಾಕ್
ಕೃಷಿ ನಗರದ ನಿವಾಸಿ ಸತೀಶ್ ಕುಮಾರ್ ಎಂಬುವವರು ತಮ್ಮ ಪಲ್ಸರ್ ಬೈಕ್ ಅನ್ನು ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಮಂಗಳೂರಿಗೆ ಹೋಗಿ ಹಿಂತಿರುಗಿದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದರೂ ಬೈಕ್ ಸಿಗಲಿಲ್ಲ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
![]() |
» ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು
ಮಾರ್ನಮಿ ಬೈಲ್ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಹಾಡಹಗಲೆ ಕಳವು ಮಾಡಲಾಗಿದೆ. ಇಲ್ಲಿನ ಅಶ್ವಾಕ್ ಅಹಮದ್ ಅವರು ತಮ್ಮ ಜಮೀನಿಗೆ ಹೋಗಿ ಬೆಳಗ್ಗೆ 10 ಗಂಟೆ ಹೊತ್ತಿಗೆ ಮನೆಗೆ ಮರಳಿದ್ದರು. ಮನೆ ಮುಂದೆ ಹೋಂಡಾ ಆಕ್ಟೀವಾ ಬೈಕ್ ನಿಲ್ಲಿಸಿ ಒಳಗೆ ಹೋಗಿದ್ದರು. ಅರ್ಧ ಗಂಟೆ ಬಳಿಕ ಗಮನಿಸಿದಾಗ ಹೋಂಡಾ ಆಕ್ಟೀವಾ ಮನೆ ಮುಂದೆ ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ » ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200