ಶಿವಮೊಗ್ಗ : ಖರೀದಿಸುವವನಂತೆ ಬಂದು ಬೈಕ್ ಟ್ರಯಲ್ (Trail) ನೋಡಲು ಕೊಂಡೊಯ್ದವನು ಹಿಂತಿರುಗಿಲ್ಲ ಎಂದು ಆರೋಪಿಸಿ ಬೈಕ್ ಮಾಲೀಕ ದೂರು ನೀಡಿದ್ದಾನೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸನಗರದ ಪ್ರಮೋದ್ ಭಟ್ ಎಂಬುವವರು ತಮ್ಮ ಪಲ್ಸರ್ ಬೈಕ್ ಮಾರಾಟ ಮಾಡಲು ನಿರ್ಧರಿಸಿ ಫೇಸ್ಬುಕ್ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್ ಎಂಬಾತ ಇದಕ್ಕೆ ರಿಪ್ಲೆ ಮಾಡಿ, ಬೈಕ್ನ ವಿವರ ಪಡೆದುಕೊಂಡಿದ್ದ. ಮಾ.30ರಂದು ಶಿವಮೊಗ್ಗಕ್ಕೆ ಬರುವುದಾಗಿ ಆತ ತಿಳಿಸಿದ್ದರಿಂದ ಪ್ರಮೋದ್ ಭಟ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಂದಿದ್ದರು.

‘ಲೋನ್ ಕಟ್ಟಿಕೊಳ್ತೀನಿ, ಟ್ರಯಲ್ ನೋಡ್ತೀನಿ’
ಅಶೋಕ ಹೊಟೇಲ್ ಬಳಿ ಪ್ರಮೋದ್ ಭಟ್ನನ್ನು ಭೇಟಿಯಾದ ನವೀನ್ ಎಂಬಾತ, ಬೈಕ್ ಖರೀದಿಗೆ ಆಸಕ್ತಿ ತೋರಿಸಿದ್ದ. ‘70 ಸಾವಿರ ರೂ. ಹಣ ನೀಡುತ್ತೇನೆ. ಉಳಿದ 1.20 ಲಕ್ಷ ರೂ. ಬೈಕ್ ಸಾಲವನ್ನು ತೀರಿಸುತ್ತೇನೆʼ ಎಂದು ತಿಳಿಸಿದ್ದ. ಅಲ್ಲದೆ ಬೈಕ್ನ ಟ್ರಯಲ್ (Trail) ನೋಡುವುದಿದೆ ಎಂದು ತಿಳಿಸಿ ಕೊಂಡೊಯ್ದಿದ್ದ.
ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ
ಮಧ್ಯಾಹ್ನ 12 ಗಂಟೆಗೆ ಬೈಕ್ ಕೊಂಡೊಯ್ದವನು ಹಿಂತಿರುಗಿರಲಿಲ್ಲ. ಮಧ್ಯಾಹ್ನ 2 ಗಂಟೆವರೆಗೆ ಫೋನ್ ಸ್ವೀಕರಿಸಿದ್ದ ನವೀನ್, ಬಳಿಕ ಫೋನ್ ಸ್ವೀಕರಿಸಿರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬೈಕ್ನ ಟ್ರಯಲ್ಗೆ ಕೊಂಡೊಯ್ದವನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಪ್ರಮೋದ್ ಭಟ್ ದೂರು ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200