SHIVAMOGGA LIVE NEWS | BIKE THEFT | 13 ಏಪ್ರಿಲ್ 2022
ಬಾರ್ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಐದು ಬೈಕ್ ಸಹಿತ ಒಬ್ಬ ಕಳ್ಳ ಸಿಕ್ಕಿಬಿದ್ದಿದ್ದಾನೆ.
ಹೊಳೆಹೊನ್ನೂರಿನ ಕಲ್ಲಿಹಾಳ್ ಸರ್ಕಲ್ ಬಳಿಯ ಶಫೀವುಲ್ಲಾ ಅಲಿಯಾಸ್ ರೋಹಿತ್ (26) ಬಂಧಿತ. ಈತನಿಂದ ಐದು ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ.
ಏನಿದು ಪ್ರಕರಣ?
ಮಾರ್ಚ್ 8ರ ಮದ್ಯಾಹ್ನ ದಿನೇಶ್ ಎಂಬುವವರು ಶಂಕರಮಠ ರಸ್ತೆಯ ಬಾರ್ ಒಂದರ ಮುಂದೆ ಬೈಕ್ ನಿಲ್ಲಿಸಿ ಸಮೀಪದ ಬೇಕರಿಗೆ ತೆರಳಿದ್ದಾರೆ. ಕೆಲವೇ ಹೊತ್ತಿನಲ್ಲಿ ಹಿಂತಿರುಗಿದ್ದಾರೆ. ಅಷ್ಟರಲ್ಲಿ ಅವರ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಿಕ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. (BIKE THEFT)
ಒಬ್ಬ ಕಳ್ಳ, ಐದು ಬೈಕ್
ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಹೊಳೆಹೊನ್ನೂರು ಕಲ್ಲಿಹಾಳ್ ಸರ್ಕಲ್’ನ ಶಫೀವುಲ್ಲಾ ಅಲಿಯಾಸ್ ರೋಹಿತ್ (26) ಎಂಬಾತ ಸಿಕ್ಕಿಬಿದ್ದಿದ್ದಾನೆ. ಈತನಿಂದ ಐದು ಬೈಕ್ ವಶಕ್ಕೆ ಪಡೆಯಲಾಗಿದೆ. ಕೋಟೆ ಠಾಣೆಯ ನಾಲ್ಕು ಪ್ರಕರಣ, ದಾವಣಗೆರೆಯ ಕೆಟಿಜೆ ನಗರ ಠಾಣೆಯ ಒಂದು ಬೈಕ್ ಕಳವು ಪ್ರಕರಣ ಭೇದಿಸಿದಂತಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200