ಒಂದು ಬೈಕ್ ಕಳ್ಳತನದ ತನಿಖೆ ನಡೆಸುತ್ತಿದ್ದ ಭದ್ರಾವತಿ ಪೊಲೀಸರಿಗೆ ಮೂರು ಬೈಕ್ ಸಹಿತ ಸಿಕ್ಕಿಬಿದ್ದ ಕಳ್ಳ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 ಆಗಸ್ಟ್ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಬೈಕ್ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕೂಬಾ ಮಸೀದಿ ಬಳಿ ಬೈಕ್ ಕಳವಾಗಿದ್ದ ಸಂಬಂಧ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಯುವಕ ಸಿಕ್ಕಿಬಿದ್ದಿದ್ದಾನೆ.

ಭದ್ರಾವತಿ ಇಂದಿರಾ ನಗರದ ಮಹಮ್ಮದ್ ಹರ್ಷದ್ (22) ಬಂಧಿತ. ಆಗಸ್ಟ್ 18ರಂದು ಮಸೀದಿ ಬಳಿ ಸೈಯದ್ ಮುಸ್ತಫಾ ಎಂಬುವವರ ಬೈಕ್ ಕಳ್ಳತನ ಮಾಡಿದ್ದ. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹಮ್ಮದ್ ಹರ್ಷದ್ ಸಿಕ್ಕಿಬಿದ್ದಿದ್ದಾನೆ.

Shivamogga Live Promotion

ಆರೋಪಿಯಿಂದ ಮೂರು ಬೈಕ್’ಗಳನ್ನು ವಶಕ್ಕೆ ಪಡೆಯಲಾಗಿದೆ. ಈತನ ವಿರುದ್ಧ ಹಳೇನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು, ಈತನ ವಿರುದ್ಧ ನ್ಯೂಟೌನ್ ಮತ್ತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಪ್ರಕರಣಗಳು ದಾಖಲಾಗಿವೆ.

AVvXsEjqI8PPMNmhmzTK72s6aHdyGOwaxgBbnPaxEgdNmEiwLVxu2qPFWOl6pNSi5TkLjb7eVIwUDa7oTDLioeFYHsTaIvxkbizculAS6mYiPjBUAXSI3yUj FPfEWxml8DJztTgufNzviEAb8 E9X6L8I0JOYK4raqr

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment