ಶಿವಮೊಗ್ಗ ಲೈವ್.ಕಾಂ | HOLEHONNURU CRIME NEWS | 14 ಜನವರಿ 2022
ಮನೆ ಮುಂಭಾಗ ನಿಲ್ಲಸಿದ್ದ ಬೈಕ್’ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಮೂವರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭ ಆರು ಬೈಕ್’ಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ಪಂಚವಟಿ ಕಾಲನಿಯ ಆಟೋ ಚಾಲಕ ಸುರೇಶ ಕರಡಿ (24), ಮಿಳಘಟ್ಟದ ಅಭಿಷೇಕ್ (22) ಗಾಜನೂರಿನ ಇಂದ್ರನಗರದ ಶಿವಕುಮಾರ್ (23) ಬಂಧಿತ ಆರೋಪಿಗಳು.
ಇವರು ಶಿರಾಳಕೊಪ್ಪ, ಗಾಜನೂರು, ಹೊಳೆಹೊನ್ನೂರು ಸೇರಿದಂತೆ ಹಲವು ಕಡೆಗಳಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ಗಳನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಪೊಲೀಸರು ಮೂವರು ಕಳ್ಳರನ್ನು ಬಂಧಿಸಿ ಅವರ ಬಳಿಯಿದ್ದ 6 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಪಿಐ ಲಕ್ಷ್ಮೀಪತಿ, ಪಿಎಸ್ಐ ಸುರೇಶ, ಸಿಬ್ಬಂದಿ ಮಂಜುನಾಥ, ಮಾಯಪ್ಪ, ಕುಬೇರ ನಾಯ್ಕ, ಪ್ರಕಾಶ್ ನಾಯ್ಕ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200