ಶಿವಮೊಗ್ಗ: ಡಾಂಬರ್ ವ್ಯಾಪಾರಿಯೊಬ್ಬರಿಗೆ (bitumen trader) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI) ನೋಂದಣಿ ಮಾಡಿಸಿಕೊಡುವುದಾಗಿ ನಂಬಿಸಿ ₹31,06,300 ವಂಚಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹೇಗಾಯ್ತು ವಂಚನೆ?
ಶಿವಮೊಗ್ಗ ಜಿಲ್ಲೆಯ ಡಾಂಬಾರ್ ವ್ಯಾಪಾರಿಯೊಬ್ಬರು (ಹೆಸರು ಗೌಪ್ಯ) ತಮ್ಮ ವ್ಯಾಪಾರಕ್ಕಾಗಿ ಜಸ್ಟ್ ಡಯಲ್ನಲ್ಲಿ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಂಡಿದ್ದರು. ಇದನ್ನು ಬಳಸಿಕೊಂಡ ಅಪರಿಚಿತರು, ತಾವು ರಾಕ್ಯಾಲಿಡ್ ಎಂಬ ಕಂಪನಿಯ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದರು.

ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಡಾಂಬರ್ ಸರಬರಾಜು ಮಾಡಲು ನೋಂದಣಿ ಅಗತ್ಯವಿದೆ ಎಂದು ನಂಬಿಸಿದ್ದರು. ಇದಕ್ಕಾಗಿ ವಿವಿಧ ಹಂತಗಳಲ್ಲಿ ನೋಂದಣಿ ಶುಲ್ಕ ಮತ್ತು ಇತರೆ ವೆಚ್ಚಗಳ ಹೆಸರಿನಲ್ಲಿ ವ್ಯಾಪಾರಿಯಿಂದ ಹಣ ವರ್ಗಾಯಿಸಿಕೊಂಡಿದ್ದರು. ಹಣ ಪಾವತಿಸಿದರೂ ನೋಂದಣಿ ಪ್ರಕ್ರಿಯೆ ನಡೆಯದಿದ್ದಾಗ ಮತ್ತು ಪುನಃ ಹಣಕ್ಕೆ ಬೇಡಿಕೆ ಇಟ್ಟಾಗ ವ್ಯಾಪಾರಿಗೆ ತಾವು ಮೋಸ ಹೋಗಿರುವುದು ಅರಿವಾಗಿದೆ.
ಇದನ್ನೂ ಓದಿ » ATMನಿಂದ ಹಿಂತಿರುಗಿ ಬ್ಯಾಂಕಿನಲ್ಲಿ ಅಕೌಂಟ್ ಚೆಕ್ ಮಾಡಿದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





