SHIVAMOGGA LIVE NEWS | BLADE | 17 ಮೇ 2022
ಮನೆಯೊಳಗೆ ಮಲಗಿದ್ದ ವ್ಯಕ್ತಿಯೊಬ್ಬರ ಕೆನ್ನೆ, ಹಣೆ, ಕುತ್ತಿಗೆಗೆ ಅಪರಿಚಿತನೊಬ್ಬ ಬ್ಲೇಡ್’ನಿಂದ (BLADE) ಇರಿದು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಭದ್ರಾವತಿ (BHADRAVATHI) ತಾಲೂಕು ರಾಮನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಯಲವಟ್ಟಿ ಗ್ರಾಮದ ಕುಮಾರನಾಯ್ಕ ಗಾಯಾಳು
ಹೇಗಾಯ್ತು ಘಟನೆ?
ಯಲವಟ್ಟಿಯ ಕುಮಾರನಾಯ್ಕ ರಾಮನಕೊಪ್ಪದಲ್ಲಿರುವ ತನ್ನ ಹೆಂಡತಿ ಮನೆಯಲ್ಲಿ ವಾಸವಿದ್ದ. ಭಾನುವಾರ ರಾತ್ರಿ 1.30ರ ಹೊತ್ತಿಗೆ ಅಪರಿಚಿತನೊಬ್ಬ ಮನೆಯೊಳಗೆ ಪ್ರವೇಶ ಮಾಡಿದ್ದಾನೆ.
ಕುಮಾರನಾಯ್ಕ ಮಲಗಿದ್ದಲ್ಲಿಗೆ ಬಳಿ ಬಂದು ಪೇಪರ್ ಕತ್ತರಿಸುವ ಸಣ್ಣ ಚಾಕುವಿನಿಂದ ಹಣೆ, ಕೆನ್ನೆ ಮತ್ತು ಕುತ್ತಿಗೆ ಮುಂಭಾಗಕ್ಕೆ ಇರಿದಿದ್ದಾನೆ. ಕುಮಾರನಾಯ್ಕ ಜೋರಾಗಿ ಕೂಗಿಕೊಂಡಿದ್ದರಿಂದ ಪತ್ನಿ ಎಚ್ಚರಗೊಂಡಿದ್ದಾರೆ. ಲೈಟ್ ಹಾಕಲು ಪತ್ನಿ ಮುಂದಾಗುತ್ತಿದ್ದಂತೆ ಆಕೆಯನ್ನು ತಳ್ಳಿ ಅಪರಿಚತನ ಪರಾರಿಯಾಗಿದ್ದಾನೆ.
ಗಾಯಗೊಂಡಿದ್ದ ಕುಮಾರನಾಯ್ಕನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಯಿತು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200