SHIVAMOGGA LIVE NEWS | 28 ಮಾರ್ಚ್ 2022
ಬೊಲೇರೋ ಗೂಡ್ಸ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ.
ಭದ್ರಾವತಿ ತಾಲೂಕು ಬಸವನಗುಡಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೊಲೇರೋ ಗೂಡ್ಸ್ ವಾಹನದ ಚಾಲಕ ನೂರ್ ಅಹಮ್ಮದ್ (44) ಮೃತಪಟ್ಟಿದ್ದಾರೆ.
ಹೇಗಾಯ್ತು ಅಪಘಾತ?
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದ ಗಡಿ ರಂಗಾಪುರ, ಕಾಳೇನಹಳ್ಳಿಯ ನಿವಾಸಿಗಳು ಶಿವಮೊಗ್ಗಕ್ಕೆ ಬಂದು ಹಿಂತಿರುಗುತ್ತಿದ್ದರು. ಶನಿವಾರ ರಾತ್ರಿ 8.20ರ ಹೊತ್ತಿಗೆ ತಮ್ಮೂರಿಗೆ ಮರಳುತ್ತಿದ್ದರು. ಭದ್ರಾವತಿಯ ಬಸವನಗುಡಿ ಗ್ರಾಮದ ಸಂದ್ಯಾದೀಪ ವೃದ್ಧಾಶ್ರಮದ ಮುಂದೆ ಅಪಘಾತ ಸಂಭವಿಸಿದೆ.
ಅಂತರಗಂಗೆ ಕಡೆಯಿಂದ ಬಂದ ಬೊಲೇರೋ ಪಿಕಪ್ ವಾಹನ ಅಜ್ಜಂಪುರ ಕಡೆಗೆ ತೆರಳುತ್ತಿದ್ದ ಬೊಲೋರೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅಜ್ಜಂಪುರ ಕಡೆಗೆ ತೆರಳುತ್ತಿದ್ದ ಬೊಲೇರೋ ಪಿಕಪ್ ವಾಹನದ ಚಾಲಕ ನೂರ್ ಅಹಮ್ಮದ್ ಅವರಿಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಗಡಿರಂಗಾಪುರದ ಗಂಗಾಧರ, ಮಂಜಪ್ಪ, ಜನಪ್ಪ, ತಿಮ್ಮೇಶ, ಕಾಳೇನಹಳ್ಳಿಯ ತೌಫಿಕ್ ಎಂಬುವವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200