ಸೀರೆಯಿಂದ ಕಟ್ಟಿದ್ದ ಜೋಕಾಲಿಗೆ ಸಿಲುಕಿ ಭದ್ರಾವತಿಯ ಬಾಲಕ ಶಿವಮೊಗ್ಗದಲ್ಲಿ ಸಾವು

 ಶಿವಮೊಗ್ಗ  LIVE 

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021

ಆಟವಾಡುತ್ತಿದ್ದ ಬಾಲಕನಿಗೆ ಜೋಕಾಲಿಯೇ ಉರುಳಾಗಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಶಿವಮೊಗ್ಗದ ಜಯನಗರದಲ್ಲಿ ಘಟನೆ ಸಂಭವಿಸಿದೆ.

ಭರತ್ (12) ಮೃತ ದುರ್ದೈವಿ. ಸೀರೆಯಿಂದ ಕಟ್ಟಿದ ಜೋಕಾಲಿ ಕುತ್ತಿಗೆಗೆ ಬಿಗಿದುಕೊಂಡಿದ್ದು, ಭರತ್ ಕೊನೆಯುಸಿರೆಳೆದಿದ್ದಾನೆ.

ಹೇಗಾಯ್ತು ಘಟನೆ?

ಹಲ್ಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಭರತ ತನ್ನ ತಾಯಿಯೊಂದಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ. ಜಯನಗರದಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮನೆಯ ಕೊಠಡಿಯಲ್ಲಿ ಸೀರೆಯಿಂದ ಕಟ್ಟಿದ್ದ ಜೋಕಾಲಿಯಲ್ಲಿ ಭರತ್ ಆಟವಾಡುತ್ತಿದ್ದ.

ಸಮೀಪದಲ್ಲೇ ಇದ್ದ ಮತ್ತೊಬ್ಬ ಸಂಬಂಧಿಕರ ಮನೆಗೆ ಭರತನ ತಾಯಿ ತೆರಳಿದ್ದರು. ಹಿಂತಿರುಗಿದಾಗ ಕೊಠಡಿಯಲ್ಲಿ ಭರತ ಮಂಡಿಯೂರಿ ಕೂತಂತೆ ಕಂಡಿತು. ಪರಿಶೀಲಿಸಿದಾಗ ಭರತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಶೀಲಿಸಿದ ವೈದ್ಯರು ಭರತ್ ಮೃತನಾಗಿರುವುದಾಗಿ ತಿಳಿಸಿದ್ದಾರೆ.

ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVT JULY NANJAPPA HOSPITAL HOME LAB TESTING

238274473 1178430235970218 2635873810325074933 n.jpg? nc cat=106&ccb=1 5& nc sid=730e14& nc ohc=RmV6nLXI3JwAX9gwRnl& nc ht=scontent.fblr1 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment