ಶಿವಮೊಗ್ಗ ಲೈವ್.ಕಾಂ | RIPPONPETE NEWS | 2 ಜುಲೈ 2021
ಪೋಷಕರ ಎದುರಲ್ಲೆ ಮಗ ಹೊಳೆ ಪಾಲಾದ ಕರುಣಾಜನಕ ಘಟನೆ ರಿಪ್ಪನ್ಪೇಟೆ ಸಮೀಪ ವರದಿಯಾಗಿದೆ. ಹೊಸನಗರ ತಾಲೂಕು ಮುತ್ತಲ ಹೊಳೆಯಲ್ಲಿ ಘಟನೆ ಸಂಭವಿಸಿದೆ.
![]() |
ಸಿದ್ದೇಶ್ ಅಲಿಯಾಸ್ ಸಚಿನ್ (14) ನೀರಿನಲ್ಲಿ ಮುಳುಗಿದ ಬಾಲಕ. ತಂದೆ, ತಾಯಿ, ಸಹೋದರನ ಕಣ್ಣೆದುರಲ್ಲೇ ಈತ ನೀರಿನಲ್ಲಿ ಮುಳುಗಿದ್ದಾನೆ.
ಬಟ್ಟೆ ಒಗೆಯಲು ಹೋಗಿದ್ದರು
ಜಾಗದ್ದೆಯ ಶೇಷಗಿರಿ, ಮಧುಮತಿ ಅವರು ಇಬ್ಬರು ಮಕ್ಕಳನ್ನು ಕರೆದುಕೊಂಡು ಮುತ್ತಲ ಹೊಳೆಯಲ್ಲಿ ಬಟ್ಟೆ ಒಗೆಯಲು ತೆರಳಿದ್ದರು. ಈ ಸಂದರ್ಭ ಸಂಜಯ್ ಮತ್ತು ಸಚಿನ್ ಇಬ್ಬರು ಮುತ್ತಲ ಹೊಳೆಯಲ್ಲಿ ಈಜುತ್ತಿದ್ದರು. ಈ ವೇಳೆ ಕಾಲು ಜಾರಿ ಹೊಳೆಯ ಮಧ್ಯ ಭಾಗಕ್ಕೆ ಹೋದ ಸಚಿನ್, ಅಲ್ಲೆ ಮುಳುಗಿದ್ದಾನೆ.
ಪೋಷಕರು, ಸಹೋದರ ಎದುರಲ್ಲೆ ಸಚಿನ್ ನೀರಿನಲ್ಲಿ ಮುಳುಗಿದರು, ರಕ್ಷಣೆ ಮಾಡಲಾಗಲಿಲ್ಲ. ಘಟನೆ ಸಂಬಂಧ ರಿಪ್ಪನ್ಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200