SHIVAMOGGA LIVE NEWS | 1 ಮಾರ್ಚ್ 2022
ಫೈನಾನ್ಸ್ ಸಂಸ್ಥೆಯೊಂದರ ಬ್ರಾಂಚ್ ಮ್ಯಾನೇಜರ್ ಒಬ್ಬರ ಲ್ಯಾಪ್ ಟಾಪ್ ಬ್ಯಾಗ್ ಮತ್ತು ದಾಖಲೆಗಳ ಕಳ್ಳತನವಾಗಿದೆ. ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಘಟನೆ ಸಂಭವಿಸಿದೆ.
ವಿಶ್ವನಾಥ್ ಎಂಬುವವರು ತಮ್ಮ ಲ್ಯಾಪ್ ಟಾಪ್, ಸೇರಿದಂತೆ ಪ್ರಮುಖ ದಾಖಲೆಗಳನ್ನು ಕಳೆದುಕೊಂಡಿದ್ದಾರೆ.
ಹೇಗಾಯ್ತು ಘಟನೆ?
ವಿಶ್ವನಾಥ್ ಅವರು ಡೆಪ್ಯುಟೇಷನ್ ಮೇಲೆ ಫೈನಾನ್ಸ್ ಸಂಸ್ಥೆಯ ಶಿವಮೊಗ್ಗ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಬರುತ್ತಿದ್ದರು. ದಾವಣಗೆರೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ತಾವು ಕುಳಿತಿದ್ದ ಸೀಟಿನ ಮೇಲೆ ಲಗೇಜ್ ಇರಿಸಲು ಇದ್ದ ಜಾಗದಲ್ಲಿ ಬ್ಯಾಗ್ ಇಟ್ಟಿದ್ದರು.
ಬಸ್ಸು ಬೆಳಗ್ಗೆ 10 ಗಂಟೆ ಹೊತ್ತಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದೆ. ಆಗ ನೋಡಿದಾಗ ಬ್ಯಾಗ್ ಇತ್ತು. ಕರ್ನಾಟಕ ಸಂಘ ಬಳಿ ಬಸ್ ಬಂದಾಗ ಲಗೇಜ್ ಜಾಗದಲ್ಲಿ ಬ್ಯಾಗ್ ಇರಲಿಲ್ಲ. ಹುಡುಕಾಡಿದರೂ ಸಿಗಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲ್ಯಾಪ್ ಟಾಪ್, ಎಟಿಎಂ, ಕೀಗಳು
ಬ್ಯಾಗ್’ನಲ್ಲಿ ಫೈನಾನ್ಸ್ ಸಂಸ್ಥೆಗೆ ಸೇರಿದ 50 ಸಾವಿರ ಮೌಲ್ಯದ ಲ್ಯಾಪ್ ಟಾಪ್ ಇತ್ತು. ಎಟಿಎಂ ಕಾರ್ಡುಗಳು, ವಿವಿಧ ದಾಖಲೆಗಳು, ಬ್ರಾಂಚ್’ನ ಕೀಗಳು ಕೂಡ ಇದ್ದವು.
ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕ ಅರೆಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200