ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಚೆನ್ನಪ್ಪ ಲೇಔಟ್ನಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿದ ಕಳ್ಳರು (burglars) ಬೆಳ್ಳಿ ವಿಗ್ರಹಗಳು ಹಾಗೂ ಸಿಸಿಟಿವಿ ಉಪಕರಣಗಳನ್ನು ಕಳವು ಮಾಡಿದ್ದಾರೆ. ಇಂಜಿನಿಯರ್ ಹೆಚ್.ಆರ್. ರವಿಕುಮಾರ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?
ರವಿಕುಮಾರ್ ಅವರು ಪತ್ನಿಯೊಂದಿಗೆ ಬೆಂಗಳೂರಿಗೆ ಹೋಗಿದ್ದರು. ವಾಪಸ್ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳರು ಮನೆಯ ಸಿಟ್ ಔಟ್ ಬಾಗಿಲನ್ನು ಆಯುಧದಿಂದ ಮೀಟಿ ಒಳನುಗ್ಗಿದ್ದಾರೆ. ಬೀರುವಿನ ಬೀಗ ಮುರಿದು ಒಳಗಿದ್ದ ವಸ್ತುಗಳನ್ನು ದೋಚಿದ್ದಾರೆ.

ಒಟ್ಟು 250 ಗ್ರಾಂ ತೂಕದ ಬೆಳ್ಳಿಯ ಗಣಪತಿ, ಗೌರಿ, ಲಕ್ಷ್ಮಿ ವಿಗ್ರಹಗಳು ಹಾಗೂ ಪಂಚಪಾತ್ರೆ ಕಳುವಾಗಿವೆ. ಕಳ್ಳರು ಕುರುಹು ಸಿಗದಂತೆ ಮನೆಯಲ್ಲಿದ್ದ ಸಿಸಿಟಿವಿ ಡಿವಿಆರ್ ಹಾಗೂ ವೈಫೈ ಕ್ಯಾಮೆರಾವನ್ನೂ ಬಿಚ್ಚಿಕೊಂಡು ಹೋಗಿದ್ದಾರೆ. ಕಳುವಾದ ವಸ್ತುಗಳ ಒಟ್ಟು ಮೌಲ್ಯ ₹65,000 ಎಂದು ಅಂದಾಜಿಸಲಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ಚನ್ನಪ್ಪ ಲೇಔಟ್ನಲ್ಲಿ ಬೆಳಗ್ಗೆ ಮನೆ ಹೊರ ಬಂದ ಯುವಕನಿಗೆ ಕಾದಿತ್ತು ಆಘಾತ

LATEST NEWS
- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

- ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

- ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

- ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್, ಏನಿದು?

About The Editor
ನಿತಿನ್ ಆರ್.ಕೈದೊಟ್ಲು









