Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮದುವೆಗೆ ತೆರಳುತ್ತಿದ್ದಾಗ ಯಮನಂತೆ ಎದುರಾದ ಲಾರಿ, ಮನೆಗೆ ಬೆಂಕಿ, ಎಲ್ಲವು ಭಸ್ಮ – 3 ಕ್ರೈಮ್ ನ್ಯೂಸ್

ಮದುವೆಗೆ ತೆರಳುತ್ತಿದ್ದಾಗ ಯಮನಂತೆ ಎದುರಾದ ಲಾರಿ, ಮನೆಗೆ ಬೆಂಕಿ, ಎಲ್ಲವು ಭಸ್ಮ – 3 ಕ್ರೈಮ್ ನ್ಯೂಸ್

03/12/2022 8:51 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 3 DECEMBER 2022

NEWS 1 – ಮದುವೆಗೆ ತೆರಳುತ್ತಿದ್ದವರಿಗೆ ಯಮನಂತೆ ಎದುರಾದ ಲಾರಿ

ಸೊರಬ : ಸಹೋದರಿಯ ಮಗಳ ಮದುವೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ (truck accident) ಹೊಡೆದು ವ್ಯಕ್ತಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರ ಗಾಯಗೊಂಡಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಹುರಳಿಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಬೈಕ್ ಚಲಾಯಿಸುತ್ತಿದ್ದ ಮುತ್ತಪ್ಪ ಮೃತಪಟ್ಟಿದ್ದಾರೆ. ಸಂಬಂಧಿ ರವಿ ಎಂಬುವವರು ಗಾಯಗೊಂಡಿದ್ದಾರೆ. ಬ್ಯಾಗವಾದಿ ಗ್ರಾಮದಿಂದ ಆನವಟ್ಟಿಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇಬ್ಬರು ಬೈಕಿನಲ್ಲಿ ತೆರಳುತ್ತಿದ್ದರು.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

Shimoga Nanjappa Hospital

ಹುರಳಿಕೊಪ್ಪ ಬಳಿ ಎದುರಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ತಲೆ ಭಾಗಕ್ಕೆ ತೀವ್ರ ಪೆಟ್ಟಾಗಿ ಮುತ್ತಪ್ಪ ಅವರಿಗೆ ರಕ್ತಸ್ರಾವ ಉಂಟಾಗಿತ್ತು. ರವಿ ಅವರಿಗು ಗಾಯವಾಗಿದೆ. ಸ್ಥಳೀಯರು ಅವರನ್ನು ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸಗೆ ಮುತ್ತಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಮತ್ತಪ್ಪ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(truck accident)

NEWS 2 – ಕಾರು, ಬಸ್ ಮುಖಾಮುಖಿ ಡಿಕ್ಕಿ

ಆನಂದಪುರ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ LIC-HOME-PRASHANTHಗಾಯವಾಗಿದೆ. ತುಪ್ಪೂರಿನಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ. ಕಾರು ಶಿವಮೊಗ್ಗದ ಸಾಗರ ಕಡೆಗೆ ತೆರಳುತ್ತಿತ್ತು. ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿತ್ತು. ತುಪ್ಪೂರಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ಘಟನೆಯಲ್ಲಿ ಕಾರು ಮತ್ತು ಬಸ್ಸಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

NEWS 3 – ಬೆಂಕಿ, ಮನೆ ಸಂಪೂರ್ಣ ಭಸ್ಮ

ಹೊಸನಗರ : ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದಕ್ಕೆ ಬೆಂಕಿ ಬಿದ್ದಿದ್ದು, ವಸ್ತುಗಳೆಲ್ಲ ಸುಟ್ಟು https://chat.whatsapp.com/KChu2C1bGTM2v9HmZlfIkSಭಸ್ಮವಾಗಿದೆ. ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗ ಗ್ರಾಮದ ರೈತ ಕೊಡ್ಲುಕೊಪ್ಪ ಗಣಪತಿ ಎಂಬುವವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆಯಲ್ಲಿ ಗಣಪತಿ, ಪತ್ನಿ, ಮಕ್ಕಳು ಎಲ್ಲರು ಇದ್ದರು. ರಾತ್ರಿ 9.30ರ ಹೊತ್ತಿಗೆ ಶಾರ್ಟ್ ಸರ್ಕಿಟ್ ಸಂಭವಿಸಿ ಹೊತ್ತುಕೊಂಡಿದೆ.

ALSO READ – ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್

ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ಚಿನ್ನಾಭರಣ, ನಗದು, ಕೆಂಪಡಿಕೆ, ಭತ್ತ, ದಿನ ಬಳಕೆ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿವೆ. ಬೆಂಕಿ ವೇಗವಾಗಿ ಹೊತ್ತುಕೊಂಡಿದ್ದರಿಂದ ಯಾವುದೆ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳಲು ಆಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಆದರೆ ಆ ಹೊತ್ತಿಗಾಗಲೆ ಎಲ್ಲವು ಸುಟ್ಟು ಕರಕಲಾಗಿತ್ತು.

Shimoga Nanjappa Hospital

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Vidyanagara-Smart-city-board ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್
Next Article holehonnur name graphics ನೀರು ಕುಡಿದ ಹಲವರಲ್ಲಿ ವಾಂತಿ, ಜ್ವರ, ಗ್ರಾಮಸ್ಥರಲ್ಲಿ ಆತಂಕ

ಇದನ್ನೂ ಓದಿ

Instagram-Cyber-Crime-Shimoga-Station.
CRIME DIARY

ಯುವತಿಗೆ ಬಂತು ಫ್ರೆಂಡ್‌ ರಿಕ್ವೆಸ್ಟ್‌, ಪರಿಶೀಲಿಸಿದಾಗ ಕಾದಿತ್ತು ಶಾಕ್‌, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
KSRTC-Bus-General-Image
CRIME DIARYSHIVAMOGGA CITY

NR ಪುರಕ್ಕೆ ತೆರಳಲು ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ಕುಳಿತ ಕಡೂರಿನ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
Bommanakatte-incident-police-investigation-on
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
-Linganamakki-Dam-General-Image
SAGARA

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 3.30 ಅಡಿ ಏರಿಕೆ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
Traffic-Jam-at-hulikal-ghat-at-hosanagara
HOSANAGARA

ಹುಲಿಕಲ್‌ ಘಾಟಿ, ಹೇರ್‌ ಪಿನ್‌ ತಿರುವಿನಲ್ಲಿ ಕೆಟ್ಟು ನಿಂತ ಲಾರಿ, ಕಿ.ಮೀ. ಉದ್ದಕ್ಕೆ ಟ್ರಾಫಿಕ್‌ ಜಾಮ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
landslide-at-Hosanagara
HOSANAGARA

ಹೊಸನಗರದಲ್ಲಿ ಕುಸಿದ ಭೂಮಿ, ಒಂದು ಅಡಿಯಷ್ಟು ಕಳೆಗಿಳಿದ ರಸ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?