ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ನಗರದ ಖಾಸಗಿ ಬಸ್ ಮಾಲೀಕ ನಿಧನದ ಬಳಿಕ ಅವರ ಸಹೋದರ, ಆತನ ಪುತ್ರ ಮತ್ತು ಕಂಡಕ್ಟರ್ಗಳು 11.65 ಲಕ್ಷ ರೂ. ದುರುಪಯೋಗ ಮಾಡಿಕೊಂಡಿದ್ದಾರೆ. ಅಲ್ಲದೆ ಮೃತ ಮಾಲೀಕನ ಪತ್ನಿ ಮತ್ತು ಮಗಳಿಗೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ.
ಖಾಸಗಿ ಬಸ್ಗಳ ಮಾಲೀಕ ಮೃತಪಟ್ಟ ಬಳಿಕ ನಾಲ್ಕು ಬಸ್ಗಳಿಂದ 11,65,013 ರೂ. ದೈನಂದಿನ ಕಲೆಕ್ಷನ್ ಆಗಿತ್ತು. ಆದರೆ ಬಸ್ಗಳ ಕಂಡೆಕ್ಟರ್ ಕಲೆಕ್ಷನ್ ಹಣವನ್ನು ಮಾಲೀಕರ ಪತ್ನಿಗೆ ನೀಡದೇ ಸಹೋದರನಿಗೆ ನೀಡಿದ್ದಾರೆ.
ಈ ಬಗ್ಗೆ ಈ ಪ್ರಶ್ನೆ ಮಾಡಿದ್ದಕ್ಕೆ ಅತ್ತಿಗೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಮೃತ ಮಾಲಿಕನ ಪತ್ನಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ | About Shivamogga Live
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200