ಶಿವಮೊಗ್ಗ LIVE
ಶಿವಮೊಗ್ಗ: ಪ್ರತಿ ದಿನ ₹200 ಮೊತ್ತ ವರ್ಗಾವಣೆ ಮಾಡಿ ನಂಬಿಕೆ ಮೂಡಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹7.84 ಲಕ್ಷ ವಂಚಿಸಲಾಗಿದೆ (Investment).
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹೇಗಾಯ್ತು ವಂಚನೆ?
ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಇನ್ಸ್ಸ್ಟಾಗ್ರಾಂನಲ್ಲಿ ಪ್ರಕಟವಾದ ಜಾಹಿರಾತು ನಂಬಿ ಶಿವಮೊಗ್ಗದ ಉದ್ಯಮಿಯೊಬ್ಬರು ವಂಚನೆಗೊಳಗಾಗಿದ್ದಾರೆ. ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದಾಗ ಉದ್ಯಮಿಯನ್ನು ಗ್ರೂಪ್ ಒಂದಕ್ಕೆ ಸೇರಿಸಿಕೊಳ್ಳಲಾಯಿತು. ಮೊದಲಿಗೆ ₹20,000 ಹೂಡಿಕೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಶಿವಮೊಗ್ಗದ ಉದ್ಯಮಿ ಹೂಡಿಕೆ ಮಾಡಿದ್ದರು.
ಪ್ರತಿದಿನ ಬಂತು ₹200 ಹಣ
ಹೂಡಿಕೆ ಮಾಡಿಸಿಕೊಂಡವರು ಉದ್ಯಮಿಯ ಖಾತೆಗೆ ಪ್ರತಿದಿನ ₹200 ಹಣ ವರ್ಗಾಯಿಸುತ್ತಿದ್ದರು. 60 ದಿನದವರೆಗೆ ಹಣ ವರ್ಗಾವಣೆ ಮಾಡಲಾಗಿತ್ತು. ಬಳಿಕ ಉದ್ಯಮಿಗೆ ಮತ್ತಷ್ಟು ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಸಲಾಗಿತ್ತು. ಹಾಗಾಗಿ ಉದ್ಯಮಿ ತನ್ನ ಕುಟುಂಬದವರ ಹೆಸರಿನಲ್ಲಿ ₹7.84 ಲಕ್ಷ ಹೂಡಿಕೆ ಮಾಡಿದ್ದರು. ಆ ಬಳಿಕ ಯಾವುದೇ ಲಾಭ ಬಾರದ ಹಿನ್ನೆಲೆ ಪರಿಶೀಲಿಸಿದಾಗ ವಂಚನೆಯಾಗಿರುವುದು ಅರಿವಾಗಿದೆ.

ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಡುರಾತ್ರಿ ಮೈಸೂರು ಬಸ್ ಹತ್ತಿ ಸೀಟಿನಲ್ಲಿ ಕುಳಿತು ಶಾಲು ಹೊದ್ದುಕೊಂಡ ನಂತರ ನರ್ಸ್ಗೆ ಕಾದಿತ್ತು ಶಾಕ್
Investment
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





