ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022
ಜಮೀನಿನಲ್ಲಿದ್ದ ಕೊಳವೆ ಬಾವಿಯ ಮೋಟರ್’ಗೆ ಅಳವಡಿಸಿದ್ದ ಕೇಬಲ್ ವೈರ್ ಮತ್ತು ಬ್ಯಾಟರಿಯನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಣಿದಾಳು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಗಾಣಿದಾಳು ಗ್ರಾಮದ ನಾಗರಾಜು ಎಂಬುವವರ ಜಾಮೀನನಲ್ಲಿ ಕೊಳೆವೆ ಬಾವಿ ತೆಗೆಸಿದ್ದರು. ಜಮೀನಿಗೆ ನೀರು ಹಾಯಿಸಲು ಆಟೋ ಸ್ಟಾರ್ಟರ್ ಮೋಟರ್ ಅಳವಡಿಸಲಾಗಿದೆ. ರಾತ್ರಿ ನಾಗರಾಜ್ ಅವರು ಮೋಟರ್ ಸ್ವಿಚ್ ಆನ್ ಮಾಡಿ ಬಂದಿದ್ದರು.
ಬೆಳಗ್ಗೆ ಜಮೀನಿಗೆ ಹೋಗಿ ನೋಡಿದಾಗ ಮೋಟರ್ ಆನ್ ಆಗಿರಲಿಲ್ಲ. ಪರಿಶೀಲನೆ ನಡೆಸಿದಾಗ ಮೋಟರ್’ಗೆ ಅಳವಡಿಸಿದ್ದ ಸುಮಾರು 300 ಅಡಿ ಉದ್ದದ ಕೇಬಲ್ ಮತ್ತು ಬ್ಯಾಟರಿ ನಾಪತ್ತೆಯಾಗಿತ್ತು. ಇದರ ಮೌಲ್ಯ 20 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಹಣಗೆರೆಯಲ್ಲಿ ಪೂಜೆ ಮುಗಿಸಿ ಹೊರ ಬಂದ ಹಾವೇರಿಯ ಭಕ್ತರಿಗೆ ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200