BREAKING NEWS | ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ದಿಢೀರ್ ನಾಪತ್ತೆ..!

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 18 ಏಪ್ರಿಲ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿಕೊಡುವಂತೆ ಕುಟುಂಬದವರು ಪೊಲೀಸರ ಮೊರೆ ಹೋಗಿದ್ದಾರೆ.

ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಯುಸುಫ್ ಖಾನ್ ನಾಪತ್ತೆಯಾದ್ದಾರೆ. ನಿನ್ನೆ ಬೆಳಗಿನ ಜಾವ ಮನೆಯಿಂದ ತೆರಳಿರುವ ಯುಸುಫ್ ಖಾನ್, ಹಿಂತಿರುಗಿಲ್ಲ. ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಆತಂಕಕ್ಕೀಡಾಗಿರುವ ಕುಟುಂಬದವರು ದೂರು ನೀಡಿದ್ದಾರೆ.

ಯುಸುಫ್ ಮನೆಗೆ ಎಸ್.ಪಿ ಭೇಟಿ

ಇನ್ನು, ಲೋಕಸಭೆ ಚುನಾವಣೆಯ ಅಭ್ಯರ್ಥಿ ನಾಪತ್ತೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ, ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ ಸೇರಿದಂತೆ ಹಿರಿಯ ಅಧಿಕಾರಿಗಳು, ಸೂಳೆಬೈಲಿನಲ್ಲಿರುವ ಯುಸುಫ್ ಖಾನ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.

57368701 827089634319125 5262368100572987392 n.jpg? nc cat=104& nc oc=AQnao0Y49SeQEotiGj2yp lP6HlcaB27H gHCeYeMu MN0YDaqn9noSyWoS0DIPaaB8cyuVPN8aszRg xkDVYlfT& nc ht=scontent.fblr1 4

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಎರಡು ಗಂಟೆ ಹೊತ್ತಿಗೆ ಮನೆ ಬಿಟ್ಟಿದ್ದಾರೆ. ಇನ್ನೂ ಪತ್ತೆಯಾಗಿಲ್ಲ. ಅವರು ನಾಪತ್ತೆಯಾಗಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.

ಐದೇ ನಿಮಿಷದಲ್ಲಿ ಬರ್ತೀನಿ ಅಂತಾ ಹೋದರು.

ನಿನ್ನೆ ಭದ್ರಾವತಿಯಲ್ಲಿ ಪ್ರಚಾರ ನಡೆಸಿದ್ದರು. ರಾತ್ರಿ ತಡವಾಗಿ ಮನೆಗೆ ಮರಳಿದ್ದರು. ಆದರೆ ಐದೇ ನಿಮಿಷದಲ್ಲಿ ಬರುತ್ತೇನೆ ಎಂದು ಕಾರು ಚಲಾಯಿಸಿಕೊಂಡು ಹೊರಗೆ ಹೋದವರು, ಹಿಂತಿರುಗಿಲ್ಲ. ಮೊಬೈಲ್ ಕೂಡ ಮನೆಯಲ್ಲೆ ಇದೆ ಎಂದು ಯುಸುಫ್ ಖಾನ್ ಪುತ್ರ ಮೊಹಮ್ಮದ್ ಸುಲೇಮಾನ್ ಖಾನ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment