ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |31 DECEMBER 2022
ಸಾಗರ : ರಸ್ತೆ ಅಗಲೀಕರಣ ಕಾಮಗಾರಿಯ ಗುಂಡಿಗೆ (road work) ಬಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕಗಳಿಲ್ಲದಿರುವುದು ಘಟನೆ ಕಾರಣ ಎಂದು ಆರೋಪಿಸಲಾಗಿದೆ.

ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಕಾರು ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ (road work) ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ – ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್, ಮತ್ತೆ ಬರ್ತಿದೆ ವಿಸ್ಟಾಡೋಮ್, ವಿಶೇಷತೆಗಳೇನು?
ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕಗಳಿಲ್ಲ. ಹಾಗಾಗಿ ವಾಹನ ಸವಾರರಿಗೆ ಗುಂಡಿಗಳಿರುವುದು ಗೊತ್ತಾಗುತ್ತಿಲ್ಲ. ಇದರಿಂದ ಅಪಘಾತ ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸೂಚನಾ ಫಲಕಗಳನ್ನು ಅಳವಡಿಸಿ
ಇನ್ನು, ನಗರಸಭೆಯ ಸಾಮಾನ್ಯ ಸಭೆಯಲ್ಲಿ ವಿಚಾರ ಪ್ರಸ್ತಾಪ ಮಾಡಿದ ಶಾಸಕ ಹರತಾಳು ಹಾಲಪ್ಪ ಅವರು, ನಗರಸಭೆ ವ್ಯಾಪ್ತಿಯಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಸ್ಥಳದಲ್ಲಿ ಸರಿಯಾದ ಸೂಚನಾ ಫಲಕಗಳು ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಅಧಿಕಾರಿಗಳೆ ನೇರ ಹೊಣೆ. ಈ ಕೂಡಲೆ ಕಾಮಗಾರಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು ಎಂದು ಸೂಚನೆ ನೀಡಿದರು.

LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – OUR WHATSAPP GROUP



