SHIVAMOGGA LIVE NEWS | 30 APRIL 2024
BHADRAVATHI : ಬೆಳಗಿನ ಜಾವ ಕಸ ಬಿಸಾಡಲು ತೆರಳಿದ್ದ ಮಹಿಳೆಗೆ ಭದ್ರಾವತಿ – ಚನ್ನಗಿರಿ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿಯ ಶ್ರೀರಾಮನಗರದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಪದ್ಮಮ್ಮ (53) ಮೃತ ದುರ್ದೈವಿ.
ಬೆಳಗ್ಗೆ 5.50ಕ್ಕೆ ಪದ್ಮಮ್ಮ ಮನೆ ಕಸ ಗುಡಿಸಿ, ಚಾನಲ್ ಬಳಿ ಬಿಸಾಡಿ ಬರಲು ತೆರಳಿದ್ದರು. ರಾಜ್ಯ ಹೆದ್ದಾರಿ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಅಪಘಾತಪಡಿಸಿದ ವಾಹನ ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದೆ. ಘಟನೆ ಸಂಬಂಧ ಪದ್ಮಮ್ಮ ಪತಿ ರಾಮೇಗೌಡ ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗಾಂಧಿ ಬಜಾರ್ ದೇಗುಲದಲ್ಲಿ ಕಳವು, ದೇವಿಯ ಮೂರ್ತಿಯ ಮುಖದ ಮೇಲೆ ಗೀಚಿದ ಕಿಡಿಗೇಡಿಗಳು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200