ಶಿವಮೊಗ್ಗ: ರಸ್ತೆ ದಾಟುವಾಗ ಕಾರು (Car) ಡಿಕ್ಕಿ ಹೊಡೆದು ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ನಿದಿಗೆ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭದ್ರಾವತಿಯ ಜಿಂಕ್ಲೈನ್ ರಸ್ತೆ ನಿವಾಸಿ ನಂಜುಂಡ.ಬಿ (57) ಮೃತರು. ಇಲ್ಲಿನ ಜೈನ್ ಪಬ್ಲಿಕ್ ಶಾಲೆಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕರ್ತವ್ಯಕ್ಕೆ ಹಾಜರಾಗಿ ಸ್ವಲ್ಪ ಸಮಯದ ಬಳಿಕ ಟೀ ಕುಡಿಯಲು ನಂಜುಂಡ ತೆರಳಿದ್ದರು.
ನಿದಿಗೆ ಬಸ್ ನಿಲ್ದಾಣದ ಕಡೆಗೆ ತೆರಳಲು ರಸ್ತೆ ದಾಟುವಾಗ ಮಲವಗೊಪ್ಪ ಕಡೆಯಿಂದ ಬಂದು ಕಾರು ಡಿಕ್ಕಿ ಹೊಡೆದು ನಂಜುಂಡ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ಹೊತ್ತಿಗಲೆ ಅವರು ಮೃತಪಟ್ಟಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮತ್ತೆ ಮೈ ಸುಡಲಿದೆ ಬಿಸಿಲು, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
Car Incident
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





