ಗಾರ್ಡನ್ ಏರಿಯಾದಲ್ಲಿ ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಬೆಳಗಾಗುವುದರಲ್ಲಿ ಕಣ್ಮರೆ

Published On : ಸೆಪ್ಟೆಂಬರ್ 1, 2021

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021

ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಖದೀಮರು ಕಳುವು ಮಾಡಿದ್ದಾರೆ. ಸದ್ದಾಗದಂತೆ ಕಾರನ್ನು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಮಾಲೀಕರು ದೂರು ನೀಡಿದ್ದಾರೆ.

ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗೋವಿಂದ ಎಂಬುವವರಿಗೆ ಸೇರಿದ ಮಾರುತಿ ಸುಜುಕಿ ವಿಟರಾ ಬ್ರಿಜಾ ಕಾರು ಕಳುವಾಗಿದೆ. ಇದರ ಅಂದಾಜು ಮೌಲ್ಯ 4.90 ಲಕ್ಷ ರೂ. ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಹೇಗಾಯ್ತು ಘಟನೆ?

ಗಾರ್ಡನ್ ಏರಿಯಾದಲ್ಲಿ ಗೋವಿಂದ ಅವರಿಗೆ ಸೇರಿದ ಕಟ್ಟಡವಿವೆ. ಪ್ರತಿ ರಾತ್ರಿ ಕಟ್ಟಡದ ಮುಂದೆ ಕಾರು ನಿಲ್ಲಿಸುತ್ತಿದ್ದರು. ಆಗಸ್ಟ್ 28ರಂದು ರಾತ್ರಿ ಕಾರು ನಿಲ್ಲಿಸಿ, ಕಟ್ಟಡದಲ್ಲಿರುವ ತಮ್ಮ ಮನೆಗೆ ಹೋಗಿದ್ದಾರೆ. ಬೆಳಗ್ಗೆ ಬಂದು ನೋಡಿದಾಗ ಕಾರು ಕಣ್ಮರೆಯಾಗಿದೆ. ಗಾಬರಿಯಾದ ಗೋವಿಂದ ಅವರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

AVvXsEjg6pSNP zPCKJ5AxskZbTphiAhyel8fkc4QBzDJ3X lXVeTsL46xZ6FlCL5ds0KHqOlW9yBTC84uYdxkpBTdLwxJa4VlU2AqXFSSBQgyLEl J0I1zv W3nFahKNjFVkZKVnr3mc2N1pP21fIRcS 9W6EJOOmt15rlSAzJoQ

240099106 1185647928581782 8436567541758160179 n.jpg? nc cat=110&ccb=1 5& nc sid=730e14& nc ohc=RXdrm55VsewAX IQT5q& nc ht=scontent.fblr1 5

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 1, 2021

Leave a Comment