ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021
ಈದ್ ಮಿಲಾದ್ ಅಂಗವಾಗಿ ಭದ್ರಾವತಿಯಲ್ಲಿ ಆಯೋಜಿಸಿದ್ದ ಮೆರವಣಿಗೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಪ್ರಕರಣ 1 : ಕೋವಿಡ್ ನಿಯಮ ಉಲ್ಲಂಘನೆ
ಅನುಮತಿ ಪಡೆಯದೆ ಏಕಾಏಕಿ ಈದ್ ಮಿಲಾದ್ ಮೆರವಣಿಗೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಲ್’ನಿಂದ, ಸಿ.ಎನ್.ರಸ್ತೆ, ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್, ತರೀಕೆರೆ ರಸ್ತೆ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಸಲಾಯಿತು. ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಮುರ್ತುಜಾ ಖಾನ್, ಅಮೀರ್ ಜಾನ್, ಬಾಬ್ ಜಾನ್, ಸಾಬ್ ಜಾನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣ 2 : ಕರ್ತವ್ಯಕ್ಕೆ ಅಡ್ಡಿ, ಬಸ್ ಹತ್ತಿ ತೊಂದರೆ
ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲವು ಯುಕವರು ರಸ್ತೆಯಲ್ಲಿ ಬರುತ್ತಿದ್ದ KSRTC ಬಸ್ಸುಗಳ ಮೇಲೆ ಹತ್ತಿ ಧ್ವಜ ತಿರುಗಿಸಿ, ಘೋಷಣೆಗಳನ್ನು ಕೂಗಿದ್ದಾರೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಸ್ಸುಗಳ ಟಾಪ್ ಮೇಲೆ ಹತ್ತಿ, ಅವಾಚ್ಯವಾಗಿ ನಿಂದಿಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಲಾಗಿದೆ. ಬಸ್ಸುಗಳನ್ನು ಹತ್ತದಂತೆ ತಡೆದ ಪೊಲೀಸರನ್ನು ತಳ್ಳಾಡಲಾಗಿದೆ. ಈ ಸಂಬಂಧ ಮುಸ್ತಾಕಿಮ್, ಚೋಟು, ಜಬೀವುಲ್ಲಾ ಸೇರಿದಂತೆ ಸುಮಾರು 20 ವಿರುದ್ಧ ಪ್ರಕರಣ ದಾಖಲಾಗಿದೆ.
ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200