ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟೆಂಬರ್ 2021
ಶಿವಮೊಗ್ಗ ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯ ಮೂವರು ಸಿಬ್ಬಂದಿ ವಿರುದ್ಧ ಅದೆ ಮಳಿಗೆಯ ಬ್ರಾಂಚ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಹಣ ದುರುಪಯೋಗವಾದ ಬಗ್ಗೆ ಆರೋಪ ಹೊರಿಸಿದ್ದಾರೆ.
ದುರ್ಗಿಗುಡಿ ಬಳಿ ಇರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ಇಬ್ಬರು ಕ್ಯಾಷಿಯರ್’ಗಳು ಮತ್ತು ಒಬ್ಬ ಅಕೌಂಟೆಂಟ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ?
ಚಿನ್ನಾಭರಣ ಮಳಿಗೆಯಲ್ಲಿ ಇಂಟರ್’ನಲ್ ಆಡಿಟಿಂಗ್ ಮಾಡಲಾಗಿದೆ. ಈ ವೇಳೆ 28 ಲಕ್ಷ ರೂ. ಹಣವನ್ನು ಸಂಸ್ಥೆಗೆ ಪಾವತಿ ಮಾಡದೆ ಇರುವುದು ಬೆಳಕಿಗೆ ಬಂದಿದೆ. ಇಬ್ಬರು ಕ್ಯಾಷಿಯರ್ ಮತ್ತು ಅಕೌಂಟೆಂಟ್ ಈ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಅಚ್ಚುಕಟ್ಟಾದ ಮನೆಗೆ ಅಚ್ಚುಕಟ್ಟಾದ ಪೀಠೋಪಕರಣ. ಶಿವಮೊಗ್ಗದಲ್ಲಿ @HOME ಶೋರೂಂ. ಒಮ್ಮೆ ಭೇಟಿ ಕೊಡಿ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200