SHIMOGA NEWS, 27 SEPTEMBER 2024 : ಹಣದ ಪಡೆದು ಜಾಮೀನು (Bail) ನೀಡಲು ಬಂದಿದ್ದ ಮಹಿಳೆ ಸೇರಿ ಇಬ್ಬರ ವಿರುದ್ಧ ನ್ಯಾಯಾಧೀಶರ ಸೂಚನೆ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣವೊಂದರಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಬೆಂಗಳೂರಿನ ಗಂಗಮ್ಮ ಎಂಬುವವರು ಬಂದಿದ್ದರು. ಆರೋಪಿ ತನಗೆ ಪರಿಚಯ ಇದ್ದಾರೆ ಎಂದು ತಿಳಿಸಿದ್ದರು. ಪ್ರಶ್ನಿಸಿದಾಗ ಗಂಗಮ್ಮಳಿಗು, ಆರೋಪಿಗು ಪರಿಯವಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ ಜಾಮೀನು ನೀಡಿದರೆ 5 ಸಾವಿರ ರೂ. ಹಣ ನೀಡುವುದಾಗಿ ಮಾಮು ಎಂಬಾತ ತಿಳಿಸಿದ್ದ ಎಂದು ನ್ಯಾಯಾಲಯದಲ್ಲಿ ಗಂಗಮ್ಮ ಒಪ್ಪಿಕೊಂಡಿದ್ದಾರೆ.
ಪರಿಚಯ ಇಲ್ಲದಿದ್ದರು ಪರಿಚಯವಿದೆ ಎಂದು, ಹಣದ ಆಮಿಷಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬುದು ಗೊತ್ತಾಗಿದೆ. ಹಾಗಾಗಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಆದೇಶಿಸಿದರು. ಅದರಂತೆ ನ್ಯಾಯಾಲಯದ ಹಿರಿಯ ಶಿರಸ್ತೆದಾರ್ ಅವರ ದೂರಿನ ಮೇರೆಗೆ ಗಂಗಮ್ಮ ಮತ್ತು ಮಾಮು ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ರೈಲ್ವೆ ಕೋಚಿಂಗ್ ಟರ್ಮಿನಲ್ಗೆ ಮಿನಿಸ್ಟರ್ ಭೇಟಿ, ಯಾವಾಗ ಮುಗಿಯುತ್ತೆ ಕಾಮಗಾರಿ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200