SHIVAMOGGA LIVE NEWS | 22 FEBRURARY 2023
SHIMOGA : ತುಂಗಾ ನದಿ ದಂಡೆಯ ಮೇಲೆ ಅಕ್ರಮವಾಗಿ ಮರಳು (sand) ಸಂಗ್ರಹಿಸಿದ್ದ ಆರೋಪ ಸಂಬಂಧ ಸಾಲು ಸಾಲು ಪ್ರಕರಣ ದಾಖಲು ಮಾಡಲಾಗಿದೆ. ವಾರ ಪೂರ್ತಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಕೇಸ್ 1 : ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಂಗ್ರಹ ಮಾಡಲಾಗಿತ್ತು. ಪರವಾನಗಿ ಇಲ್ಲಿದೆ ತುಂಗಾ ನದಿ ಬಲ ದಂಡೆಯ ಮೇಲೆ ಮರಳು ಸಂಗ್ರಹಿಸಿಲಾಗಿತ್ತು. ಈ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು. ಪರಿಶೀಲನೆ ಬಳಿಕ ಇಲಾಖೆ ವತಿಯಿಂದ ಮರಳು ಸಂಗ್ರಹ ಮಾಡಿದವರ ವಿರುದ್ಧ ದೂರು ನೀಡಲಾಗಿದೆ.
ಕೇಸ್ 2 : ಹೊಳೆಹನಸವಾಡಿ ಗ್ರಾಮದ ಬಳಿ ತುಂಗಾ ನದಿಯ ದಂಡೆಯ ಮೇಲೆ ಅನಧಿಕೃತವಾಗಿ ಮರಳು (sand) ಸಂಗ್ರಹ ಮಾಡಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಪರಿಶೀಲನೆ ಬಳಿಕ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
ಕೇಸ್ 3 : ಸೂಗೂರು ಗ್ರಾಮದ ಸಮೀಪದಲ್ಲೂ ತುಂಗಾ ನದಿ ದಂಡೆ ಮೇಲೆ ಅಕ್ರಮವಾಗಿ ಮರಳು ತೆಗೆದು ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200