ವಿದ್ಯಾನಗರದಲ್ಲಿ ಬೆಳಗ್ಗೆ ವೈನ್‌ ಶಾಪ್‌ ಬಾಗಿಲು ತೆಗೆಯಲು ಬಂದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 MAY 2024

SHIMOGA : ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ಶಿವಶಂಕರ ವೈನ್‌ ಶಾಪ್‌ನ ಬಾಗಿಲುನ್ನು ಆಯುಧದಿಂದ ಮೀಟಿ ಕಳ್ಳತನ ಮಾಡಲಾಗಿದೆ. ನಗದು ಮತ್ತು ಸಿಸಿಟಿವಿಯ DVR ಕಳುವಾಗಿದೆ ಎಂದು ಆರೋಪಿಸಿ ಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ಇದನ್ನೂ ಓದಿ – ಕೃಷಿ ಹೊಂಡದಲ್ಲಿ ಬಿದ್ದ ಬಾಲಕನ ರಕ್ಷಣೆಗೆ ಧಾವಿಸಿದ ಯುವಕ, ಇಬ್ಬರು ಸಾವು, ಹೇಗಾಯ್ತು ಘಟನೆ?

ಎಂದಿನಂತೆ ಬೆಳಗ್ಗೆ ವೈನ್‌ ಶಾಪ್‌ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ಷಟರ್‌ ಬಾಗಿಲು ಮೀಟಿದಂತೆ ಕಾಣಿಸಿತ್ತು. ಪಕ್ಕದ ಮತ್ತೊಂದು ಷಟರ್‌ ತೆಗೆದು ಒಳ ಹೋಗಿ ಪರಿಶೀಲಿಸಿದಾಗ 20 ಸಾವಿರ ರೂ. ನಗದು ಕಳ್ಳತನವಾಗಿತ್ತು. ಸಿಸಿಟಿವಿಯ ಡಿವಿಆರ್‌ ಕೂಡ ನಾಪತ್ತೆಯಾಗಿತ್ತು. ಒಟ್ಟು 38 ಸಾವಿರ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment