ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020
ಜೋಡಿ ಕೊಲೆ, ಸರಣಿ ಕಳ್ಳತನ ಪ್ರಕರಣದ ಹಿನ್ನೆಲೆ ಶರಾವತಿ ಕಣಿವೆಯ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಜಿಲ್ಲಾ ರಕ್ಷಣಾಧಿಕಾರಿ ಸೂಚನೆ ಮೇರೆಗೆ ಬ್ಯಾಕೋಡು ಮತ್ತು ತುಮರಿಯಲ್ಲಿ ತುರ್ತು ಸಾರ್ವಜನಿಕ ಸಭೆ ನಡೆಸಿದ ಡಿವೈಎಸ್ಪಿ ವಿನಾಯಕ್ ಶೆಟ್ಟಿಗೇರ್ ಅವರು, ಸಿಸಿಟಿವಿ ಅಳವಡಿಸುವುದಾಗಿ ತಿಳಿಸಿದರು.
ಅಪರಿಚಿತರ ಮಾಹಿತಿ ಕೊಡಿ
ಅಹಿತಕರ ಘಟನೆ ತಡೆಯಲು ಸಾರ್ವಜನಿಕರ ಸಹಕಾರ ಅಗತ್ಯ. ಗ್ರಾಮಕ್ಕೆ ಭೇಟಿ ನೀಡುವ ಅಪರಿಚಿತರ ಕುರಿತು ಗ್ರಾಮಸ್ಥರು ನಿಗಾ ವಹಿಸಬೇಕು. ಅಲ್ಲದೆ ಈ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಇದೆ ವೇಳೆ ಡಿವೈಎಸ್ಪಿ ವಿನಾಯಕ್ ಶೆಟ್ಟಿಗೇರ್ ಅವರ ಬಳಿ ಸಾರ್ವಜನಿಕರು ಸಮಸ್ಯೆಗಳನ್ನು ಹೇಳಿಕೊಂಡರು. ಪಿಎಸ್ಐ ಪುಷ್ಪಾ, ಬ್ಯಾಕೋಡು, ಕಾರ್ಗಲ್ ಠಾಣೆ ಪೊಲೀಸ್ ಸಿಬ್ಬಂದಿಗಳು ಸಭೆಯಲ್ಲಿದ್ದರು.
ಜೋಡಿ ಕೊಲೆ, ಕಳ್ಳರ ಭೀತಿ
ಜೋಡಿ ಕೊಲೆ ಆತಂಕದಲ್ಲಿರುವ ತುಮರಿ ಗ್ರಾಮಸ್ಥರಿಗೆ ಕಳ್ಳರಿಂದ ಭೀತಿ ಶುರುವಾಗಿದೆ. ಹಾಡಹಗಲೆ ಮೂರು ಮನೆಗಳಲ್ಲಿ ಕಳ್ಳತನ ಮಾಡಲಾಗಿತ್ತು. ಇಲ್ಲಿನ ಬ್ರಾಹ್ಮಣಕೆಪ್ಪಿಯಗೆ ಚಕ್ಕೋಡು ರಾಜು, ತುಮರಿಯ ಟೈಲರ್ ಲಕ್ಷ್ಮಣ, ಸಿಗಂದೂರು ಸಮೀಪದ ವ್ಯಾಪಾರಿ ಚುಟ್ಟಿಕೆರೆ ಸಂಜೀವ ಅವರ ಮನೆಯಲ್ಲಿ ಕಳ್ಳತನವಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]