ಶಿವಮೊಗ್ಗ LIVE
ಶಿವಮೊಗ್ಗ: ತರಕಾರಿ ಮಾರಾಟ ಮಾಡಿ ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಸಿದ ಕಳ್ಳರು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಶಿವಮೊಗ್ಗ ವಿನೋಬನಗರ 16ನೇ ಕ್ರಾಸ ತಿರುವಿನಲ್ಲಿ ಘಟನೆ ಸಂಭವಿಸಿದೆ.
ಹೊನ್ನಮ್ಮ ಎಂಬುವವರು ಎಪಿಎಂಸಿ ಮುಂಭಾಗ ಮರದ ಅಡಿ ಕುಳಿತು ತರಕಾರಿ ವ್ಯಾಪಾರ ಮಾಡುತ್ತಾರೆ. ಎಂದಿನಂತೆ ವ್ಯಾಪಾರ ಮುಗಿಸಿ ಮನೆಗೆ ಮಧ್ಯಾಹ್ನ ಮನೆಗೆ ನೆಡದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಹೊನ್ನಮ್ಮ ಅವರ ಹಿಂದಿನಿಂದ ಬಂದ ಯುವಕನೊಬ್ಬ ಕೊರಳಲಿದ್ದ ಸರ ಕಸಿದುಕೊಂಡು ಓಡಿಹೋಗಿದ್ದಾನೆ. ಸ್ವಲ್ಪ ದೂರದಲ್ಲಿ ಮತ್ತೊಬ್ಬ ಯುವಕ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ. ಬೈಕಿನಲ್ಲಿ ಇಬ್ಬರು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

₹1.73 ಲಕ್ಷ ಮೌಲ್ಯದ 58 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ವಿದ್ಯಾನಗರ ರಸ್ತೆ ಡೇಂಜರ್, ಇನ್ನಷ್ಟು ಜೀವ ಹೋಗುತ್ತೆ ಹುಷಾರ್, ಇಲ್ಲಿ ಏನೇನೆಲ್ಲ ಸಮಸ್ಯೆ ಇದೆ?
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು






