ತಾಯಿ ಜೊತೆ ಬೈಕ್‌ನಲ್ಲಿ ತೆರಳುವಾಗ ಜೋರಾಗಿ ಕೂಗಿದ ಬಾಲಕಿ, ನಿಲ್ಲಿಸಿ ನೋಡಿದಾಗ ಕಾದಿತ್ತು ಆಘಾತ

ಶಿವಮೊಗ್ಗ: ಟ್ಯೂಷನ್‌ ಮುಗಿಸಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದ ಗೋಪಾಳದ ರಾಮಕೃಷ್ಣ ಶಾಲೆ ಬಳಿ ಘಟನೆ ಸಂಭವಿಸಿದೆ. ರೂಪಾ ಎಂಬುವವರು ತಮ್ಮ ಮಗಳು ಐಶ್ವರ್ಯಾಳನ್ನು ಟ್ಯೂಷನ್‌ನಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರ. ಸಂಜೆ ಸುಮಾರು 6:50ರ ಹೊತ್ತಿಗೆ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದ ಹಿಂಬದಿಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮಗಳ ಕುತ್ತಿಗೆಗೆ ಕೈ ಹಾಕಿ ಸರ ಕಸಿದಿದ್ದಾನೆ. ಈ ಸಂದರ್ಭ ಮಗಳು ಜೋರಾಗಿ ಕೂಗಿಕೊಂಡಿದ್ದು, ಸರ ಕಿತ್ತುಕೊಂಡ ಕಳ್ಳನು ವೇಗವಾಗಿ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸ್ಥಳದಲ್ಲಿ ಕತ್ತಲೆ ಇದ್ದ ಕಾರಣ ಕಳ್ಳನ ಬೈಕ್‌ನ ಕಂಪನಿ ಅಥವಾ ನಂಬರ್ ಅನ್ನು ಗಮನಿಸಲು ಸಾಧ್ಯವಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ದ್ವಿಚಕ್ರ ವಾಹನಕ್ಕೆ KSRTC ಬಸ್‌ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

Leave a Comment