ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಸೋಮವಾರ ಸಂಜೆ ಘಟನೆ ಸಂಭವಿಸಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೇಗಾಯ್ತು ಘಟನೆ?
ಸೊರಬ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಶಶಿ ಎಂಬುವವರು ರವೀಂದ್ರನಗರ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಮುಗಿಸಿ ರಾತ್ರಿ 7.50ರ ಹೊತ್ತಿಗೆ ದೇಗುಲ ಸಮೀಪವಿರುವ ತಮ್ಮ ಮನೆಗೆ ತೆರಳುತ್ತಿದ್ದರು. ದೇವಸ್ಥಾನದ ಬಳಿ ಬೈಕ್ನಲ್ಲಿ ಬಂದ ಇಬ್ಬರು, ಶಶಿ ಅವರ ಕುತ್ತಿಗೆಗೆ ಕೈ ಹಾಕಿ, ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಎರಡು ಎಳೆಯ ತಾಳಿ ಸರ
ಬೈಕ್ನಲ್ಲಿದ್ದವರು ಮಾಸ್ಕ್ ಧರಿಸಿದ್ದರು. ಕಳ್ಳರು ಕಿತ್ತುಕೊಳ್ಳಲು ಯತ್ನಿಸಿದಾಗ, ಶಶಿ ಅವರು ಮಾಂಗಲ್ಯ ಸರವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾರೆ. ಆದರೂ ಅವರಿಂದ ಮಾಂಗಲ್ಯ ಸರ ಬಿಡಿಸಿಕೊಂಡ ಕಳ್ಳರು ಅದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಎರಡು ಎಳೆಯ ಚಿನ್ನದ ಮಾಂಗಲ್ಯ ಸರ ಸುಮಾರು 40 ಗ್ರಾಂ ತೂಕವಿತ್ತು. ಅದರ ಮೌಲ್ಯ 1.60 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

About The Editor
ನಿತಿನ್ ಆರ್.ಕೈದೊಟ್ಲು






