ಶಿವಮೊಗ್ಗ ಲೈವ್.ಕಾಂ | SHIMOGA NEWS | 01 ಅಕ್ಟೋಬರ್ 2021
ಪತಿಯೊಂದಿಗೆ ಬೈಕ್’ನಲ್ಲಿ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳ್ಳತನಕ್ಕೆ ಪ್ರಯತ್ನಿಸಲಾಗಿದೆ. ಈ ವೇಳೆ ಬೈಕುಗಳ ಮಧ್ಯೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಗೆ ಗಾಯವಾಗಿದೆ. ಕಳ್ಳರು ಪರಾರಿಯಾಗಿದ್ದಾರೆ.
ಹರಿಗೆ ಚಾನಲ್ ಏರಿಯಾದ ಜಯಮ್ಮ ಅವರು ಪತಿ ಲಕ್ಕೇಗೌಡ ಅವರೊಂದಿಗೆ ಬೈಕ್’ನಲ್ಲಿ ತೆರಳುತ್ತಿದ್ದರು. ಭದ್ರಾವತಿಯಲ್ಲಿರುವ ಸಹೋದರಿ ಮನೆಯಿಂದ ತಮ್ಮ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಹೇಗಾಯ್ತು ಘಟನೆ?
ಭದ್ರಾವತಿಯಿಂದ ದಂಪತಿ ರಾತ್ರಿ 9.30ರ ಹೊತ್ತಿಗೆ ಬೈಕ್’ನಲ್ಲಿ ಹಿಂತಿರುಗುತ್ತಿದ್ದರು. ಚುಂಚಾದ್ರಿ ಕೆರೆ ಬಳಿ ಯುವಕರಿಬ್ಬರು ಬೈಕ್’ನಲ್ಲಿ ಬಂದಿದ್ದಾರೆ. ಲಕ್ಕೇಗೌಡ ಅವರು ಚಲಾಯಿಸುತ್ತಿದ್ದ ಬೈಕ್’ನ ಸಮೀಪಕ್ಕೆ ಬಂದ ಯುವಕರು, ಜಯಮ್ಮ ಅವರ ಕೊರಳಿಗೆ ಕೈ ಹಾಕಿದ್ದಾರೆ. ಈ ಸಂದರ್ಭ ಬೈಕುಗಳ ನಡುವೆ ಡಿಕ್ಕಿಯಾಗಿ ಎರಡು ಬೈಕ್’ನಲ್ಲಿದ್ದವರು ಕೆಳಗೆ ಬಿದ್ದಿದ್ದಾರೆ.
ಜನ ಸೇರುವ ಮೊದಲೆ ಕಳ್ಳರು ತಮ್ಮ ಬೈಕ್’ನಲ್ಲಿ ಪರಾರಿಯಾಗಿದ್ದಾರೆ. ಜಯಮ್ಮ ಅವರಿಗೆ ಗಾಯವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸರ ಕದಿಯಲು ವಿಫಲ ಯತ್ನ ಮತ್ತು ಅಪಘಾತಪಡಿಸಿದ ಯುವಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ದಂಪತಿ ತುಂಗಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200